7:38 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ: ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಚಾಲನೆ

07/06/2021, 20:31

ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. 


ಕಂಕನಾಡಿ ಬಿ ವಾರ್ಡ್  ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಪರಿಸರ ಪ್ರೇಮ ನಮ್ಮ ಜವಾಬ್ದಾರಿ. ಇದನ್ನು ಉಳಿಸುವ ಕಾರ್ಯ ನಿರಂತರ ಆಗಬೇಕಿದೆ. ಇದನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿ ನಿತ್ಯವು  ಇದನ್ನು ಆಚರಿಸಬೇಕೆಂದರು.
ಗಿಡವನ್ನು ಬೆಳೆಸುವುದು ಮಾತ್ರವಲ್ಲ ಅದನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. 



ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ರೆಹನಾ ಮಾತನಾಡಿ,  ವಾತಾವರಣದಲ್ಲಿ ಇಂಗಾಲದ ಡೈ ಆಕ್ಸೈಡ್ ಕಡಿಮೆ ಮಾಡಿ ಆಮ್ಲಜನಕ ಹೆಚ್ಚಿಸುವ ಸಸಿಗಳು ನಮಗೆ ಅನಿವಾರ್ಯವಾಗಿದೆ ಎಂದು ಹೇಳಿದರು. 


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ, ಪ್ರಕೃತಿ ನಮ್ಮ ಉಸಿರು ಪರಿಸರ ಮತ್ತು ಆರೋಗ್ಯಕರ ಬೆಳವಣಿಗೆಗೆ ಮನುಕುಲದ ಉಳಿವಿಗಾಗಿ ನಮ್ಮ ನಿರಂತರ ಪ್ರಯತ್ನ ಆಗಬೇಕಾಗಿದೆ ಎಂದರು. 



 ಈ ಸಂದರ್ಭದಲ್ಲಿ ಪ್ರಾಥಮಿಕ ಕೇಂದ್ರದ ಸುತ್ತಮುತ್ತ ನೆರೆ ಮನೆಯವರಿಂದ  ಗಿಡ ನೆಡಿಸಲಾಯಿತು. ಕೊರೊನಾ ವಾರಿಯರ್ಸ್ ಗಳನ್ನು  ಗೌರವಿಸಲಾಯಿತು. ಕೋವಿಡ್ ನೋಡಲ್ ಅಧಿಕಾರಿ ಡಾ.ಸೇಸಪ್ಪ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ಪಾಲಿಕೆಯ ಮಲೇರಿಯ ತಪಾಸಣಾ ಸಿಬ್ಬಂದಿಗಳು  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು