3:09 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ: ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಚಾಲನೆ

07/06/2021, 20:31

ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. 


ಕಂಕನಾಡಿ ಬಿ ವಾರ್ಡ್  ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಪರಿಸರ ಪ್ರೇಮ ನಮ್ಮ ಜವಾಬ್ದಾರಿ. ಇದನ್ನು ಉಳಿಸುವ ಕಾರ್ಯ ನಿರಂತರ ಆಗಬೇಕಿದೆ. ಇದನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿ ನಿತ್ಯವು  ಇದನ್ನು ಆಚರಿಸಬೇಕೆಂದರು.
ಗಿಡವನ್ನು ಬೆಳೆಸುವುದು ಮಾತ್ರವಲ್ಲ ಅದನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. 



ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ರೆಹನಾ ಮಾತನಾಡಿ,  ವಾತಾವರಣದಲ್ಲಿ ಇಂಗಾಲದ ಡೈ ಆಕ್ಸೈಡ್ ಕಡಿಮೆ ಮಾಡಿ ಆಮ್ಲಜನಕ ಹೆಚ್ಚಿಸುವ ಸಸಿಗಳು ನಮಗೆ ಅನಿವಾರ್ಯವಾಗಿದೆ ಎಂದು ಹೇಳಿದರು. 


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಮಾತನಾಡಿ, ಪ್ರಕೃತಿ ನಮ್ಮ ಉಸಿರು ಪರಿಸರ ಮತ್ತು ಆರೋಗ್ಯಕರ ಬೆಳವಣಿಗೆಗೆ ಮನುಕುಲದ ಉಳಿವಿಗಾಗಿ ನಮ್ಮ ನಿರಂತರ ಪ್ರಯತ್ನ ಆಗಬೇಕಾಗಿದೆ ಎಂದರು. 



 ಈ ಸಂದರ್ಭದಲ್ಲಿ ಪ್ರಾಥಮಿಕ ಕೇಂದ್ರದ ಸುತ್ತಮುತ್ತ ನೆರೆ ಮನೆಯವರಿಂದ  ಗಿಡ ನೆಡಿಸಲಾಯಿತು. ಕೊರೊನಾ ವಾರಿಯರ್ಸ್ ಗಳನ್ನು  ಗೌರವಿಸಲಾಯಿತು. ಕೋವಿಡ್ ನೋಡಲ್ ಅಧಿಕಾರಿ ಡಾ.ಸೇಸಪ್ಪ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ಪಾಲಿಕೆಯ ಮಲೇರಿಯ ತಪಾಸಣಾ ಸಿಬ್ಬಂದಿಗಳು  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು