9:12 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಎಲ್ಲ ಖಾತೆಗಳಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ: ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಎಳೆಯುತ್ತಾ ಲಕ್ಷಣ ರೇಖೆ ?

17/06/2021, 13:20

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಬಂದಿರುವ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಲಕ್ಷ್ಮಣ ರೇಖೆ ಎಳೆಯುತ್ತಾರೆಯೇ ಎನ್ನುವ ಕುತೂಹಲ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.

ಎಲ್ಲರ ಖಾತೆಗಳಲ್ಲೂ ಮುಖ್ಯಮಂತ್ರಿ ಪುತ್ರ ಕೈಯಾಡಿಸುತ್ತಿದ್ದಾರೆ ಎಂಬ ಆರೋಪ ಹಲವು ಸಮಯದಿಂದ ಬಿಜೆಪಿಯಲ್ಲಿ ಕೇಳಿ ಬರುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇದನ್ನು

ಗಂಭೀರವಾಗಿ ಪರಿಗಣಿಸುತ್ತಾರೆಯೇ ಎಂಬ ಪ್ರಶ್ನೆ ಭಿನ್ನಮತೀಯ ಶಾಸಕರಲ್ಲಿ ಕಾಡಲಾರಂಭಿಸಿದೆ.

ಇದರೊಂದಿಗೆ ಪಕ್ಷ ಮತ್ತು ಸಂಪುಟದಲ್ಲಿ ಕೆಲವು ಬದಲಾವಣೆಗಳು ಆಗುತ್ತವೆ ಎನ್ನಲಾಗಿದೆ. ಸಂಪುಟದಲ್ಲಿರುವ ಕೆಲವು ಹಳೆಯ ಮುಖಗಳಿಗೆ ಕೋಕ್ ಕೊಟ್ಟು ಹೊಸಬರನ್ನು ಸೇರಿಸುವುದು ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇದರಲ್ಲಿ ಸೇರಿದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಇಲ್ಲ ಎಂದು ಅರುಣ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸಂಜೆ ದಿಲ್ಲಿಗೆ ಹೋದ ಮೇಲೆ ರಾಜ್ಯ ಬಿಜೆಪಿಗೆ ಹೈಕಮಾಂಡ್ ನಿಂದ ಸೂಚನೆಗಳು ರವಾನೆಯಾಗುವ ಸಾಧ್ಯತೆಗಳಿವೆ. ಅದರಲ್ಲಿ ಮುಖ್ಯಮಂತ್ರಿ ಪರ ಬಣ ಹಾಗೂ ವಿರೋಧಿ ಬಣಕ್ಕೂ ಬಿಸಿ ಮುಟ್ಟಿಸುವ ಅಂಶಗಳು ಮ ಇರುತ್ತವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು