9:55 PM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

06/01/2025, 20:07

*ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ*
- *ಕೆಇಬಿ ಇಂಜಿನಿಯರ್ ಗಳ ಸಂಘದ ವಜ್ರಮಹೋತ್ಸವ ಉಪನ್ಯಾಸ, ತಾಂತ್ರಿಕ ದಿನಚರಿ ಬಿಡುಗಡೆ*


ಬೆಂಗಳೂರು(reporterkarnataka.com):
ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.
ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ ಸಂವಹನ ಉಪನ್ಯಾಸ ಹಾಗೂ ಸಂಘದ 2025ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ, ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರೆ ಎಸ್ಕಾಂಗಳಲ್ಲೂ ಶೀಘ್ರವೇ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್ಕಾಂಗಳ ಅಧ್ಯಕ್ಷರೂ ಆಗಿರುವ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸೂಚನೆ ನೀಡಿದರು.
ಇಲಾಖೆಯಲ್ಲಿ ಹಿರಿತನದ ಆಧಾರದ ಮೇಲೆ ಬಡ್ತಿ, ಹುದ್ದೆಗಳ ಭರ್ತಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಇಲಾಖೆ ಪ್ರಗತಿ ಜತೆಗೆ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಶ್ರಮಿಸುತ್ತಿರುವ ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
*ಕುಸುಮ್ ಯೋಜನೆ ತ್ವರಿತಗೊಳಿಸಿ*:
“ರೈತರಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆ ಜತೆಗೆ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದ ಯೋಜನೆ ಪ್ರಗತಿಯಲ್ಲಿದ್ದು, 2ನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯುತ್ತದೆ. ಆದ್ದರಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಹೆಚ್ಚು ಆದ್ಯತೆ ನೀಡಬೇಕು”, ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಮನವಿ ಮಾಡಿದರು.
*ಇಂಧನ ಶೇಖರಣೆಗೆ ಆದ್ಯತೆ*:
“ವಿದ್ಯುತ್ ಉತ್ಪಾದನೆ ಜತೆಗೆ ಅದನ್ನು ಶೇಖರಣೆ ಮಾಡಿ ಅಗತ್ಯ ಸಂದರ್ಭದಲ್ಲಿ ಜನರಿಗೆ ಒದಗಿಸಲು ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ಶರಾವತಿಯಲ್ಲಿ 2000 ಮೆಗಾವ್ಯಾಟ್ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಿದಂತೆ ಶೇಖರಣಾ ವ್ಯವಸ್ಥೆಯ ಅಗತ್ಯವಿದ್ದು, ಇದಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ”, ಎಂದು ತಿಳಿಸಿದರು.
ಸೆಸ್ಕ್ ಅಧ್ಯಕ್ಷ ಎ.ರಮೇಶ್ ಬಂಡಿಸಿದ್ದೇಗೌಡ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಎಸ್. ಖಾದ್ರಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್, ಸzಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ., ಕೆಇಬಿ ಎಂಜಿನಿಯರ್ ಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು