4:26 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಎಲ್ಲರ ಚಿತ್ತ ಲೋಕಸಭೆ ಎಲೆಕ್ಷನ್ ಕೌಂಟಿಂಗ್ ನತ್ತ: ಯಾರಿಗೆ ಗೆಲುವು? ಯಾರಿಗೆ ಸೋಲು?; ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ

04/06/2024, 08:19

ಹೊಸದಿಲ್ಲಿ(reporterkarnataka.com): ಎಲ್ಲರ ದೃಷ್ಟಿ ಲೋಕಸಭೆ ಚುನಾವಣೆಯ ಮತ ಎಣಿಕೆಯತ್ತ ಹೊರಳಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.
543 ಸದಸ್ಯರ ಲೋಕಸಭೆಗೆ ಸ್ಥಾನಗಳ ಪೈಕಿ 541 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಸೂರತ್ ಮತ್ತು ಇಂದೋರ್ ನ ಎರಡು
ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.
ಲೋಕಸಭೆಗೆ 7 ಹಂತಗಳಲ್ಲಿ ಮತದಾನ ನಡೆದಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಪ್ರಜಾಪ್ರಭುತ್ವ ದ ಮಹಾ ಹಬ್ಬ ಜರುಗಿದೆ. ಏಪ್ರಿಲ್ 19 (ಹಂತ 1), ಏಪ್ರಿಲ್ 26 (ಹಂತ 2), ಮೇ 7 (ಹಂತ 3), ಮೇ 13 (ಹಂತ 4) ರಂದು ಮತದಾನ ನಡೆಯಿತು. ಮೇ 20 (ಹಂತ 5), ಮೇ 25 (ಹಂತ 6), ಮತ್ತು ಜೂನ್ 1 (ಹಂತ 7) ಮುಗಿಯುವುದರೊಂದಿಗೆ ಮತದಾನ ಪ್ರಕ್ರಿಯೆ ಸಮಾಪ್ತಿಯಾಗಿದೆ.
ಚುನಾವಣಾ ಆಯೋಗದ ಪ್ರಕಾರ, ಲೋಕಸಭಾ ಚುನಾವಣೆಗಳು, ಆಂಧ್ರಪ್ರದೇಶ ಮತ್ತು ಒಡಿಶಾದ ರಾಜ್ಯ ವಿಧಾನಸಭೆಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳನ್ನು ಒಳಗೊಂಡಿರುವ ಮತ ಎಣಿಕೆಯು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು