12:53 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸುವ ಶಿವದಾಸನ್ !: ಇದು ಯಾಕೆ ಗೊತ್ತೇ? ಮುಂದಕ್ಕೆ ಓದಿ…

01/07/2021, 07:27

ಮಲಪುರಂ(reporterkarnataka news):  ಕೆಲವರು ಪ್ರಚಾರಕ್ಕಾಗಿ ಸಮಾಜ ಸೇವೆ ಮಾಡಿದರೆ, ಇನ್ನೂ ಕೆಲವರ ರಕ್ತದಲ್ಲೇ ಸಮಾಜ ಸೇವೆ ಗುಣ ಬಂದಿರುತ್ತದೆ. ಇವರಿಗೆ ಯಾವುದೇ ಪ್ರಚಾರ ಬೇಕಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಲೇ ಇರುತ್ತಾರೆ. ಅಂಥವರಲ್ಲೊಬ್ಬರು ಕೆ.ಬಿ. ಶಿವದಾಸನ್.!


ಕೇರಳದ ಮಲ್ಲಪುರ ಜಿಲ್ಲೆಯ ಚಂಗರಾಮ್ ಕುಲಂ ಪಟ್ಟಣದ ಮುಕ್ಕುತ್ತಲದವರು ಈ ಶಿವದಾಸನ್. ಬಡ, ದೀನ ದಲಿತರಿಗಾಗಿ ಇವರು ಪ್ರತಿದಿನ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಂಘಟನೆಯ, ಸಂಘ – ಸಂಸ್ಥೆಗಳ ಬೆಂಬಲವಿಲ್ಲದ ವೈಯಕ್ತಿಕ ನೆಲೆಯಲ್ಲಿ ತಾನೇ ಕೈಯಿಂದ ಹಣ ಹಾಕಿ ಸಮಾಜ ಸೇವೆ ಮಾಡುತ್ತಾರೆ. ಲಾಕ್ ಡೌನ್ ಸಮಯದಲ್ಲಿ ಆಹಾರ ಕಿಟ್ ವಿತರಿಸಿದ್ದಾರೆ. ಇದೀಗ ಲಾಕ್ ಡೌನ್ ತೆರವಾಗುತ್ತಿದ್ದಂತೆ ಜನರು ಬಳಸಿ ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ನಾಶ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.


ಶಿವದಾಸನ್ ಅವರು ಮೊದಲಿಗೆ ಈ ಕೆಲಸವನ್ನು ತನ್ನ ಮನೆ ಸುತ್ತಮುತ್ತಲಿನ ಪ್ರದೇಶದಿಂದಲೇ ಆರಂಭಿಸಿದ್ದಾರೆ. ಪೊನ್ನಾಣಿ ತಾಲೂಕಿನ ನನ್ನಮುಕ್ಕು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮುಕ್ಕುತ್ತಲ ಪ್ರದೇಶದಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ಜನವಸತಿ ಇಲ್ಲದ ಪ್ರದೇಶಕ್ಕೆ ಕೊಂಡೋಗಿ ಬೆಂಕಿ ಹಚ್ಚಿ ನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ.

ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ನಾಯಿ, ಬೆಕ್ಕುಗಳು ಮೂಸಿ ಅದರ ಮೂಲಕ ಕೊರೊನಾ ಹರಡುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ನಾಶ ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಿವದಾಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು