2:50 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸುವ ಶಿವದಾಸನ್ !: ಇದು ಯಾಕೆ ಗೊತ್ತೇ? ಮುಂದಕ್ಕೆ ಓದಿ…

01/07/2021, 07:27

ಮಲಪುರಂ(reporterkarnataka news):  ಕೆಲವರು ಪ್ರಚಾರಕ್ಕಾಗಿ ಸಮಾಜ ಸೇವೆ ಮಾಡಿದರೆ, ಇನ್ನೂ ಕೆಲವರ ರಕ್ತದಲ್ಲೇ ಸಮಾಜ ಸೇವೆ ಗುಣ ಬಂದಿರುತ್ತದೆ. ಇವರಿಗೆ ಯಾವುದೇ ಪ್ರಚಾರ ಬೇಕಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಲೇ ಇರುತ್ತಾರೆ. ಅಂಥವರಲ್ಲೊಬ್ಬರು ಕೆ.ಬಿ. ಶಿವದಾಸನ್.!


ಕೇರಳದ ಮಲ್ಲಪುರ ಜಿಲ್ಲೆಯ ಚಂಗರಾಮ್ ಕುಲಂ ಪಟ್ಟಣದ ಮುಕ್ಕುತ್ತಲದವರು ಈ ಶಿವದಾಸನ್. ಬಡ, ದೀನ ದಲಿತರಿಗಾಗಿ ಇವರು ಪ್ರತಿದಿನ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಂಘಟನೆಯ, ಸಂಘ – ಸಂಸ್ಥೆಗಳ ಬೆಂಬಲವಿಲ್ಲದ ವೈಯಕ್ತಿಕ ನೆಲೆಯಲ್ಲಿ ತಾನೇ ಕೈಯಿಂದ ಹಣ ಹಾಕಿ ಸಮಾಜ ಸೇವೆ ಮಾಡುತ್ತಾರೆ. ಲಾಕ್ ಡೌನ್ ಸಮಯದಲ್ಲಿ ಆಹಾರ ಕಿಟ್ ವಿತರಿಸಿದ್ದಾರೆ. ಇದೀಗ ಲಾಕ್ ಡೌನ್ ತೆರವಾಗುತ್ತಿದ್ದಂತೆ ಜನರು ಬಳಸಿ ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ನಾಶ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.


ಶಿವದಾಸನ್ ಅವರು ಮೊದಲಿಗೆ ಈ ಕೆಲಸವನ್ನು ತನ್ನ ಮನೆ ಸುತ್ತಮುತ್ತಲಿನ ಪ್ರದೇಶದಿಂದಲೇ ಆರಂಭಿಸಿದ್ದಾರೆ. ಪೊನ್ನಾಣಿ ತಾಲೂಕಿನ ನನ್ನಮುಕ್ಕು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮುಕ್ಕುತ್ತಲ ಪ್ರದೇಶದಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ಜನವಸತಿ ಇಲ್ಲದ ಪ್ರದೇಶಕ್ಕೆ ಕೊಂಡೋಗಿ ಬೆಂಕಿ ಹಚ್ಚಿ ನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ.

ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ನಾಯಿ, ಬೆಕ್ಕುಗಳು ಮೂಸಿ ಅದರ ಮೂಲಕ ಕೊರೊನಾ ಹರಡುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ನಾಶ ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಿವದಾಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು