10:39 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸುವ ಶಿವದಾಸನ್ !: ಇದು ಯಾಕೆ ಗೊತ್ತೇ? ಮುಂದಕ್ಕೆ ಓದಿ…

01/07/2021, 07:27

ಮಲಪುರಂ(reporterkarnataka news):  ಕೆಲವರು ಪ್ರಚಾರಕ್ಕಾಗಿ ಸಮಾಜ ಸೇವೆ ಮಾಡಿದರೆ, ಇನ್ನೂ ಕೆಲವರ ರಕ್ತದಲ್ಲೇ ಸಮಾಜ ಸೇವೆ ಗುಣ ಬಂದಿರುತ್ತದೆ. ಇವರಿಗೆ ಯಾವುದೇ ಪ್ರಚಾರ ಬೇಕಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಲೇ ಇರುತ್ತಾರೆ. ಅಂಥವರಲ್ಲೊಬ್ಬರು ಕೆ.ಬಿ. ಶಿವದಾಸನ್.!


ಕೇರಳದ ಮಲ್ಲಪುರ ಜಿಲ್ಲೆಯ ಚಂಗರಾಮ್ ಕುಲಂ ಪಟ್ಟಣದ ಮುಕ್ಕುತ್ತಲದವರು ಈ ಶಿವದಾಸನ್. ಬಡ, ದೀನ ದಲಿತರಿಗಾಗಿ ಇವರು ಪ್ರತಿದಿನ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಂಘಟನೆಯ, ಸಂಘ – ಸಂಸ್ಥೆಗಳ ಬೆಂಬಲವಿಲ್ಲದ ವೈಯಕ್ತಿಕ ನೆಲೆಯಲ್ಲಿ ತಾನೇ ಕೈಯಿಂದ ಹಣ ಹಾಕಿ ಸಮಾಜ ಸೇವೆ ಮಾಡುತ್ತಾರೆ. ಲಾಕ್ ಡೌನ್ ಸಮಯದಲ್ಲಿ ಆಹಾರ ಕಿಟ್ ವಿತರಿಸಿದ್ದಾರೆ. ಇದೀಗ ಲಾಕ್ ಡೌನ್ ತೆರವಾಗುತ್ತಿದ್ದಂತೆ ಜನರು ಬಳಸಿ ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ನಾಶ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.


ಶಿವದಾಸನ್ ಅವರು ಮೊದಲಿಗೆ ಈ ಕೆಲಸವನ್ನು ತನ್ನ ಮನೆ ಸುತ್ತಮುತ್ತಲಿನ ಪ್ರದೇಶದಿಂದಲೇ ಆರಂಭಿಸಿದ್ದಾರೆ. ಪೊನ್ನಾಣಿ ತಾಲೂಕಿನ ನನ್ನಮುಕ್ಕು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮುಕ್ಕುತ್ತಲ ಪ್ರದೇಶದಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ಜನವಸತಿ ಇಲ್ಲದ ಪ್ರದೇಶಕ್ಕೆ ಕೊಂಡೋಗಿ ಬೆಂಕಿ ಹಚ್ಚಿ ನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ.

ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ನಾಯಿ, ಬೆಕ್ಕುಗಳು ಮೂಸಿ ಅದರ ಮೂಲಕ ಕೊರೊನಾ ಹರಡುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ನಾಶ ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಿವದಾಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು