7:58 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸುವ ಶಿವದಾಸನ್ !: ಇದು ಯಾಕೆ ಗೊತ್ತೇ? ಮುಂದಕ್ಕೆ ಓದಿ…

01/07/2021, 07:27

ಮಲಪುರಂ(reporterkarnataka news):  ಕೆಲವರು ಪ್ರಚಾರಕ್ಕಾಗಿ ಸಮಾಜ ಸೇವೆ ಮಾಡಿದರೆ, ಇನ್ನೂ ಕೆಲವರ ರಕ್ತದಲ್ಲೇ ಸಮಾಜ ಸೇವೆ ಗುಣ ಬಂದಿರುತ್ತದೆ. ಇವರಿಗೆ ಯಾವುದೇ ಪ್ರಚಾರ ಬೇಕಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಲೇ ಇರುತ್ತಾರೆ. ಅಂಥವರಲ್ಲೊಬ್ಬರು ಕೆ.ಬಿ. ಶಿವದಾಸನ್.!


ಕೇರಳದ ಮಲ್ಲಪುರ ಜಿಲ್ಲೆಯ ಚಂಗರಾಮ್ ಕುಲಂ ಪಟ್ಟಣದ ಮುಕ್ಕುತ್ತಲದವರು ಈ ಶಿವದಾಸನ್. ಬಡ, ದೀನ ದಲಿತರಿಗಾಗಿ ಇವರು ಪ್ರತಿದಿನ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಂಘಟನೆಯ, ಸಂಘ – ಸಂಸ್ಥೆಗಳ ಬೆಂಬಲವಿಲ್ಲದ ವೈಯಕ್ತಿಕ ನೆಲೆಯಲ್ಲಿ ತಾನೇ ಕೈಯಿಂದ ಹಣ ಹಾಕಿ ಸಮಾಜ ಸೇವೆ ಮಾಡುತ್ತಾರೆ. ಲಾಕ್ ಡೌನ್ ಸಮಯದಲ್ಲಿ ಆಹಾರ ಕಿಟ್ ವಿತರಿಸಿದ್ದಾರೆ. ಇದೀಗ ಲಾಕ್ ಡೌನ್ ತೆರವಾಗುತ್ತಿದ್ದಂತೆ ಜನರು ಬಳಸಿ ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ನಾಶ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ.


ಶಿವದಾಸನ್ ಅವರು ಮೊದಲಿಗೆ ಈ ಕೆಲಸವನ್ನು ತನ್ನ ಮನೆ ಸುತ್ತಮುತ್ತಲಿನ ಪ್ರದೇಶದಿಂದಲೇ ಆರಂಭಿಸಿದ್ದಾರೆ. ಪೊನ್ನಾಣಿ ತಾಲೂಕಿನ ನನ್ನಮುಕ್ಕು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮುಕ್ಕುತ್ತಲ ಪ್ರದೇಶದಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ಅದನ್ನು ಜನವಸತಿ ಇಲ್ಲದ ಪ್ರದೇಶಕ್ಕೆ ಕೊಂಡೋಗಿ ಬೆಂಕಿ ಹಚ್ಚಿ ನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ.

ಎಲ್ಲೆಂದರಲ್ಲಿ ಎಸೆದ ಮಾಸ್ಕ್ ಗಳನ್ನು ನಾಯಿ, ಬೆಕ್ಕುಗಳು ಮೂಸಿ ಅದರ ಮೂಲಕ ಕೊರೊನಾ ಹರಡುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸಿ ನಾಶ ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಶಿವದಾಸನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು