7:47 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ರಸ್ತೆ ಅಗೆತ: ಖಾಸಗಿ ಸಿಟಿ ಬಸ್ ಸಂಚಾರ ಶುರು; ದಾರಿ ಯಾವುದಯ್ಯಾ ಸ್ಮಾರ್ಟ್ ಸಿಟಿಗೆ? 

01/07/2021, 07:02

ಮಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೇರಿದ ಪರಿಣಾಮ ಸುಮಾರು ಒಂದು ತಿಂಗಳಿನಿಂದ ಸ್ಥಗಿತಗೊಂಡಿರುವ ಸಿಟಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಬಸ್ ಸಂಚಾರವೇನು ಶುರುವಾಯಿತು ಅಂತ ನಗರಕ್ಕೆ ಆಗಮಿಸಿದವರಿಗೆ ಒಂದು ಕ್ಷಣ ಶಾಕ್ ಆಗುವುದು ಖಂಡಿತಾ. ಯಾಕೆಂದರೆ ದಾರಿ ಯಾವುದಯ್ಯಾ ಮಂಗಳೂರಿಗೆ ಎನ್ನುವ ಪರಿಸ್ಥಿತಿ ಉದ್ಭವಿಸಿದೆ.

ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ನಗರಾದ್ಯಂತ ರಸ್ತೆಯನ್ನು ಅಗೆದು ಹಾಕಲಾಗಿದೆ. ನಗರದ ಆಯಕಟ್ಟಿನ ಪ್ರದೇಶವಾದ ಲೈಟ್ ಹೌಸ್ ಹಿಲ್ ರೋಡ್, ಬಂಟ್ಸ್ ಹಾಸ್ಟೆಲ್ ರೋಡ್, ಬೆಸೆಂಟ್ ರಸ್ತೆ, ಡೊಂಗರಕೇರಿ ರಸ್ತೆ ಇವೆಲ್ಲ ಕಡೆ ರಸ್ತೆ ಮರು ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಇದು ನಗರದ ಹೃದಯಭಾಗವಾಗ ಹಂಪನಕಟ್ಟೆ ಪ್ರದೇಶವನ್ನು ಸಂಪರ್ಕಿಸುವ ರಸ್ತೆ ಆಗಿದೆ. ಇಂದಿನಿಂದ ಆರಂಭವಾದ ಸಿಟಿ ಬಸ್, ಸರ್ವಿಸ್ ಬಸ್, ಖಾಸಗಿ ವಾಹನಗಳು ಈ ರಸ್ತೆಯ ಮೂಲಕವೇ ಸಂಚರಿಸಬೇಕು. ಅದಲ್ಲದೆ ಬಸ್ ಆರಂಭವಾಗುತ್ತಿದ್ದಂತೆ ಕೊರೊನಾ ಲಸಿಕೆ ಹಾಕಿಸುವವರು, ಇತರ ವೈದ್ಯಕೀಯೋಪಚಾರ ಪಡೆಯಲು ಬಯಸುವವರು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸುತ್ತಾರೆ. ಅದಲ್ಲದೆ ಜಾಲಿ ರೈಡ್ ಹೋಗುವವರ ಸಂಖ್ಯೆಯೂ ಬಹಳಷ್ಟಿದೆ. ಇವೆಲ್ಲದರ ಪರಿಣಾಮವಾಗಿ ಟ್ರಾಫಿಕ್ ಕಿರಿಕಿರಿ ಉಂಟಾಗಲಿದೆ.

ಜಿಲ್ಲೆಯಲ್ಲಿ ನಾಳೆಯಿಂದ ಸಂಜೆ 5 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲಿದೆ. ಮಾಲ್, ಥಿಯೇಟರ್, ಪಬ್, ಬಾರ್, ಹೋಟೆಲ್ ಹೊರತುಪಡಿಸಿ ಎಲ್ಲ ವ್ಯವಹಾರ ಆರಂಭವಾಗಲಿದೆ. ಹೋಟೆಲ್,  ಬಾರ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು