4:16 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ರಸ್ತೆ ಅಗೆತ: ಖಾಸಗಿ ಸಿಟಿ ಬಸ್ ಸಂಚಾರ ಶುರು; ದಾರಿ ಯಾವುದಯ್ಯಾ ಸ್ಮಾರ್ಟ್ ಸಿಟಿಗೆ? 

01/07/2021, 07:02

ಮಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೇರಿದ ಪರಿಣಾಮ ಸುಮಾರು ಒಂದು ತಿಂಗಳಿನಿಂದ ಸ್ಥಗಿತಗೊಂಡಿರುವ ಸಿಟಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಬಸ್ ಸಂಚಾರವೇನು ಶುರುವಾಯಿತು ಅಂತ ನಗರಕ್ಕೆ ಆಗಮಿಸಿದವರಿಗೆ ಒಂದು ಕ್ಷಣ ಶಾಕ್ ಆಗುವುದು ಖಂಡಿತಾ. ಯಾಕೆಂದರೆ ದಾರಿ ಯಾವುದಯ್ಯಾ ಮಂಗಳೂರಿಗೆ ಎನ್ನುವ ಪರಿಸ್ಥಿತಿ ಉದ್ಭವಿಸಿದೆ.

ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ನಗರಾದ್ಯಂತ ರಸ್ತೆಯನ್ನು ಅಗೆದು ಹಾಕಲಾಗಿದೆ. ನಗರದ ಆಯಕಟ್ಟಿನ ಪ್ರದೇಶವಾದ ಲೈಟ್ ಹೌಸ್ ಹಿಲ್ ರೋಡ್, ಬಂಟ್ಸ್ ಹಾಸ್ಟೆಲ್ ರೋಡ್, ಬೆಸೆಂಟ್ ರಸ್ತೆ, ಡೊಂಗರಕೇರಿ ರಸ್ತೆ ಇವೆಲ್ಲ ಕಡೆ ರಸ್ತೆ ಮರು ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಇದು ನಗರದ ಹೃದಯಭಾಗವಾಗ ಹಂಪನಕಟ್ಟೆ ಪ್ರದೇಶವನ್ನು ಸಂಪರ್ಕಿಸುವ ರಸ್ತೆ ಆಗಿದೆ. ಇಂದಿನಿಂದ ಆರಂಭವಾದ ಸಿಟಿ ಬಸ್, ಸರ್ವಿಸ್ ಬಸ್, ಖಾಸಗಿ ವಾಹನಗಳು ಈ ರಸ್ತೆಯ ಮೂಲಕವೇ ಸಂಚರಿಸಬೇಕು. ಅದಲ್ಲದೆ ಬಸ್ ಆರಂಭವಾಗುತ್ತಿದ್ದಂತೆ ಕೊರೊನಾ ಲಸಿಕೆ ಹಾಕಿಸುವವರು, ಇತರ ವೈದ್ಯಕೀಯೋಪಚಾರ ಪಡೆಯಲು ಬಯಸುವವರು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸುತ್ತಾರೆ. ಅದಲ್ಲದೆ ಜಾಲಿ ರೈಡ್ ಹೋಗುವವರ ಸಂಖ್ಯೆಯೂ ಬಹಳಷ್ಟಿದೆ. ಇವೆಲ್ಲದರ ಪರಿಣಾಮವಾಗಿ ಟ್ರಾಫಿಕ್ ಕಿರಿಕಿರಿ ಉಂಟಾಗಲಿದೆ.

ಜಿಲ್ಲೆಯಲ್ಲಿ ನಾಳೆಯಿಂದ ಸಂಜೆ 5 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲಿದೆ. ಮಾಲ್, ಥಿಯೇಟರ್, ಪಬ್, ಬಾರ್, ಹೋಟೆಲ್ ಹೊರತುಪಡಿಸಿ ಎಲ್ಲ ವ್ಯವಹಾರ ಆರಂಭವಾಗಲಿದೆ. ಹೋಟೆಲ್,  ಬಾರ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು