8:38 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ರಸ್ತೆ ಅಗೆತ: ಖಾಸಗಿ ಸಿಟಿ ಬಸ್ ಸಂಚಾರ ಶುರು; ದಾರಿ ಯಾವುದಯ್ಯಾ ಸ್ಮಾರ್ಟ್ ಸಿಟಿಗೆ? 

01/07/2021, 07:02

ಮಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೇರಿದ ಪರಿಣಾಮ ಸುಮಾರು ಒಂದು ತಿಂಗಳಿನಿಂದ ಸ್ಥಗಿತಗೊಂಡಿರುವ ಸಿಟಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಬಸ್ ಸಂಚಾರವೇನು ಶುರುವಾಯಿತು ಅಂತ ನಗರಕ್ಕೆ ಆಗಮಿಸಿದವರಿಗೆ ಒಂದು ಕ್ಷಣ ಶಾಕ್ ಆಗುವುದು ಖಂಡಿತಾ. ಯಾಕೆಂದರೆ ದಾರಿ ಯಾವುದಯ್ಯಾ ಮಂಗಳೂರಿಗೆ ಎನ್ನುವ ಪರಿಸ್ಥಿತಿ ಉದ್ಭವಿಸಿದೆ.

ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ನಗರಾದ್ಯಂತ ರಸ್ತೆಯನ್ನು ಅಗೆದು ಹಾಕಲಾಗಿದೆ. ನಗರದ ಆಯಕಟ್ಟಿನ ಪ್ರದೇಶವಾದ ಲೈಟ್ ಹೌಸ್ ಹಿಲ್ ರೋಡ್, ಬಂಟ್ಸ್ ಹಾಸ್ಟೆಲ್ ರೋಡ್, ಬೆಸೆಂಟ್ ರಸ್ತೆ, ಡೊಂಗರಕೇರಿ ರಸ್ತೆ ಇವೆಲ್ಲ ಕಡೆ ರಸ್ತೆ ಮರು ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಇದು ನಗರದ ಹೃದಯಭಾಗವಾಗ ಹಂಪನಕಟ್ಟೆ ಪ್ರದೇಶವನ್ನು ಸಂಪರ್ಕಿಸುವ ರಸ್ತೆ ಆಗಿದೆ. ಇಂದಿನಿಂದ ಆರಂಭವಾದ ಸಿಟಿ ಬಸ್, ಸರ್ವಿಸ್ ಬಸ್, ಖಾಸಗಿ ವಾಹನಗಳು ಈ ರಸ್ತೆಯ ಮೂಲಕವೇ ಸಂಚರಿಸಬೇಕು. ಅದಲ್ಲದೆ ಬಸ್ ಆರಂಭವಾಗುತ್ತಿದ್ದಂತೆ ಕೊರೊನಾ ಲಸಿಕೆ ಹಾಕಿಸುವವರು, ಇತರ ವೈದ್ಯಕೀಯೋಪಚಾರ ಪಡೆಯಲು ಬಯಸುವವರು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸುತ್ತಾರೆ. ಅದಲ್ಲದೆ ಜಾಲಿ ರೈಡ್ ಹೋಗುವವರ ಸಂಖ್ಯೆಯೂ ಬಹಳಷ್ಟಿದೆ. ಇವೆಲ್ಲದರ ಪರಿಣಾಮವಾಗಿ ಟ್ರಾಫಿಕ್ ಕಿರಿಕಿರಿ ಉಂಟಾಗಲಿದೆ.

ಜಿಲ್ಲೆಯಲ್ಲಿ ನಾಳೆಯಿಂದ ಸಂಜೆ 5 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲಿದೆ. ಮಾಲ್, ಥಿಯೇಟರ್, ಪಬ್, ಬಾರ್, ಹೋಟೆಲ್ ಹೊರತುಪಡಿಸಿ ಎಲ್ಲ ವ್ಯವಹಾರ ಆರಂಭವಾಗಲಿದೆ. ಹೋಟೆಲ್,  ಬಾರ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು