12:07 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ರಸ್ತೆ ಅಗೆತ: ಖಾಸಗಿ ಸಿಟಿ ಬಸ್ ಸಂಚಾರ ಶುರು; ದಾರಿ ಯಾವುದಯ್ಯಾ ಸ್ಮಾರ್ಟ್ ಸಿಟಿಗೆ? 

01/07/2021, 07:02

ಮಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೇರಿದ ಪರಿಣಾಮ ಸುಮಾರು ಒಂದು ತಿಂಗಳಿನಿಂದ ಸ್ಥಗಿತಗೊಂಡಿರುವ ಸಿಟಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಬಸ್ ಸಂಚಾರವೇನು ಶುರುವಾಯಿತು ಅಂತ ನಗರಕ್ಕೆ ಆಗಮಿಸಿದವರಿಗೆ ಒಂದು ಕ್ಷಣ ಶಾಕ್ ಆಗುವುದು ಖಂಡಿತಾ. ಯಾಕೆಂದರೆ ದಾರಿ ಯಾವುದಯ್ಯಾ ಮಂಗಳೂರಿಗೆ ಎನ್ನುವ ಪರಿಸ್ಥಿತಿ ಉದ್ಭವಿಸಿದೆ.

ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ನಗರಾದ್ಯಂತ ರಸ್ತೆಯನ್ನು ಅಗೆದು ಹಾಕಲಾಗಿದೆ. ನಗರದ ಆಯಕಟ್ಟಿನ ಪ್ರದೇಶವಾದ ಲೈಟ್ ಹೌಸ್ ಹಿಲ್ ರೋಡ್, ಬಂಟ್ಸ್ ಹಾಸ್ಟೆಲ್ ರೋಡ್, ಬೆಸೆಂಟ್ ರಸ್ತೆ, ಡೊಂಗರಕೇರಿ ರಸ್ತೆ ಇವೆಲ್ಲ ಕಡೆ ರಸ್ತೆ ಮರು ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಇದು ನಗರದ ಹೃದಯಭಾಗವಾಗ ಹಂಪನಕಟ್ಟೆ ಪ್ರದೇಶವನ್ನು ಸಂಪರ್ಕಿಸುವ ರಸ್ತೆ ಆಗಿದೆ. ಇಂದಿನಿಂದ ಆರಂಭವಾದ ಸಿಟಿ ಬಸ್, ಸರ್ವಿಸ್ ಬಸ್, ಖಾಸಗಿ ವಾಹನಗಳು ಈ ರಸ್ತೆಯ ಮೂಲಕವೇ ಸಂಚರಿಸಬೇಕು. ಅದಲ್ಲದೆ ಬಸ್ ಆರಂಭವಾಗುತ್ತಿದ್ದಂತೆ ಕೊರೊನಾ ಲಸಿಕೆ ಹಾಕಿಸುವವರು, ಇತರ ವೈದ್ಯಕೀಯೋಪಚಾರ ಪಡೆಯಲು ಬಯಸುವವರು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸುತ್ತಾರೆ. ಅದಲ್ಲದೆ ಜಾಲಿ ರೈಡ್ ಹೋಗುವವರ ಸಂಖ್ಯೆಯೂ ಬಹಳಷ್ಟಿದೆ. ಇವೆಲ್ಲದರ ಪರಿಣಾಮವಾಗಿ ಟ್ರಾಫಿಕ್ ಕಿರಿಕಿರಿ ಉಂಟಾಗಲಿದೆ.

ಜಿಲ್ಲೆಯಲ್ಲಿ ನಾಳೆಯಿಂದ ಸಂಜೆ 5 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲಿದೆ. ಮಾಲ್, ಥಿಯೇಟರ್, ಪಬ್, ಬಾರ್, ಹೋಟೆಲ್ ಹೊರತುಪಡಿಸಿ ಎಲ್ಲ ವ್ಯವಹಾರ ಆರಂಭವಾಗಲಿದೆ. ಹೋಟೆಲ್,  ಬಾರ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು