12:30 PM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ರಸ್ತೆ ಅಗೆತ: ಖಾಸಗಿ ಸಿಟಿ ಬಸ್ ಸಂಚಾರ ಶುರು; ದಾರಿ ಯಾವುದಯ್ಯಾ ಸ್ಮಾರ್ಟ್ ಸಿಟಿಗೆ? 

01/07/2021, 07:02

ಮಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೇರಿದ ಪರಿಣಾಮ ಸುಮಾರು ಒಂದು ತಿಂಗಳಿನಿಂದ ಸ್ಥಗಿತಗೊಂಡಿರುವ ಸಿಟಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಬಸ್ ಸಂಚಾರವೇನು ಶುರುವಾಯಿತು ಅಂತ ನಗರಕ್ಕೆ ಆಗಮಿಸಿದವರಿಗೆ ಒಂದು ಕ್ಷಣ ಶಾಕ್ ಆಗುವುದು ಖಂಡಿತಾ. ಯಾಕೆಂದರೆ ದಾರಿ ಯಾವುದಯ್ಯಾ ಮಂಗಳೂರಿಗೆ ಎನ್ನುವ ಪರಿಸ್ಥಿತಿ ಉದ್ಭವಿಸಿದೆ.

ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ನಗರಾದ್ಯಂತ ರಸ್ತೆಯನ್ನು ಅಗೆದು ಹಾಕಲಾಗಿದೆ. ನಗರದ ಆಯಕಟ್ಟಿನ ಪ್ರದೇಶವಾದ ಲೈಟ್ ಹೌಸ್ ಹಿಲ್ ರೋಡ್, ಬಂಟ್ಸ್ ಹಾಸ್ಟೆಲ್ ರೋಡ್, ಬೆಸೆಂಟ್ ರಸ್ತೆ, ಡೊಂಗರಕೇರಿ ರಸ್ತೆ ಇವೆಲ್ಲ ಕಡೆ ರಸ್ತೆ ಮರು ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಇದು ನಗರದ ಹೃದಯಭಾಗವಾಗ ಹಂಪನಕಟ್ಟೆ ಪ್ರದೇಶವನ್ನು ಸಂಪರ್ಕಿಸುವ ರಸ್ತೆ ಆಗಿದೆ. ಇಂದಿನಿಂದ ಆರಂಭವಾದ ಸಿಟಿ ಬಸ್, ಸರ್ವಿಸ್ ಬಸ್, ಖಾಸಗಿ ವಾಹನಗಳು ಈ ರಸ್ತೆಯ ಮೂಲಕವೇ ಸಂಚರಿಸಬೇಕು. ಅದಲ್ಲದೆ ಬಸ್ ಆರಂಭವಾಗುತ್ತಿದ್ದಂತೆ ಕೊರೊನಾ ಲಸಿಕೆ ಹಾಕಿಸುವವರು, ಇತರ ವೈದ್ಯಕೀಯೋಪಚಾರ ಪಡೆಯಲು ಬಯಸುವವರು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸುತ್ತಾರೆ. ಅದಲ್ಲದೆ ಜಾಲಿ ರೈಡ್ ಹೋಗುವವರ ಸಂಖ್ಯೆಯೂ ಬಹಳಷ್ಟಿದೆ. ಇವೆಲ್ಲದರ ಪರಿಣಾಮವಾಗಿ ಟ್ರಾಫಿಕ್ ಕಿರಿಕಿರಿ ಉಂಟಾಗಲಿದೆ.

ಜಿಲ್ಲೆಯಲ್ಲಿ ನಾಳೆಯಿಂದ ಸಂಜೆ 5 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲಿದೆ. ಮಾಲ್, ಥಿಯೇಟರ್, ಪಬ್, ಬಾರ್, ಹೋಟೆಲ್ ಹೊರತುಪಡಿಸಿ ಎಲ್ಲ ವ್ಯವಹಾರ ಆರಂಭವಾಗಲಿದೆ. ಹೋಟೆಲ್,  ಬಾರ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು