3:23 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಎಲ್ಲೆಂದರಲ್ಲಿ ರಸ್ತೆ ಅಗೆತ: ಖಾಸಗಿ ಸಿಟಿ ಬಸ್ ಸಂಚಾರ ಶುರು; ದಾರಿ ಯಾವುದಯ್ಯಾ ಸ್ಮಾರ್ಟ್ ಸಿಟಿಗೆ? 

01/07/2021, 07:02

ಮಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೇರಿದ ಪರಿಣಾಮ ಸುಮಾರು ಒಂದು ತಿಂಗಳಿನಿಂದ ಸ್ಥಗಿತಗೊಂಡಿರುವ ಸಿಟಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಬಸ್ ಸಂಚಾರವೇನು ಶುರುವಾಯಿತು ಅಂತ ನಗರಕ್ಕೆ ಆಗಮಿಸಿದವರಿಗೆ ಒಂದು ಕ್ಷಣ ಶಾಕ್ ಆಗುವುದು ಖಂಡಿತಾ. ಯಾಕೆಂದರೆ ದಾರಿ ಯಾವುದಯ್ಯಾ ಮಂಗಳೂರಿಗೆ ಎನ್ನುವ ಪರಿಸ್ಥಿತಿ ಉದ್ಭವಿಸಿದೆ.

ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ನಗರಾದ್ಯಂತ ರಸ್ತೆಯನ್ನು ಅಗೆದು ಹಾಕಲಾಗಿದೆ. ನಗರದ ಆಯಕಟ್ಟಿನ ಪ್ರದೇಶವಾದ ಲೈಟ್ ಹೌಸ್ ಹಿಲ್ ರೋಡ್, ಬಂಟ್ಸ್ ಹಾಸ್ಟೆಲ್ ರೋಡ್, ಬೆಸೆಂಟ್ ರಸ್ತೆ, ಡೊಂಗರಕೇರಿ ರಸ್ತೆ ಇವೆಲ್ಲ ಕಡೆ ರಸ್ತೆ ಮರು ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಇದು ನಗರದ ಹೃದಯಭಾಗವಾಗ ಹಂಪನಕಟ್ಟೆ ಪ್ರದೇಶವನ್ನು ಸಂಪರ್ಕಿಸುವ ರಸ್ತೆ ಆಗಿದೆ. ಇಂದಿನಿಂದ ಆರಂಭವಾದ ಸಿಟಿ ಬಸ್, ಸರ್ವಿಸ್ ಬಸ್, ಖಾಸಗಿ ವಾಹನಗಳು ಈ ರಸ್ತೆಯ ಮೂಲಕವೇ ಸಂಚರಿಸಬೇಕು. ಅದಲ್ಲದೆ ಬಸ್ ಆರಂಭವಾಗುತ್ತಿದ್ದಂತೆ ಕೊರೊನಾ ಲಸಿಕೆ ಹಾಕಿಸುವವರು, ಇತರ ವೈದ್ಯಕೀಯೋಪಚಾರ ಪಡೆಯಲು ಬಯಸುವವರು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಆಗಮಿಸುತ್ತಾರೆ. ಅದಲ್ಲದೆ ಜಾಲಿ ರೈಡ್ ಹೋಗುವವರ ಸಂಖ್ಯೆಯೂ ಬಹಳಷ್ಟಿದೆ. ಇವೆಲ್ಲದರ ಪರಿಣಾಮವಾಗಿ ಟ್ರಾಫಿಕ್ ಕಿರಿಕಿರಿ ಉಂಟಾಗಲಿದೆ.

ಜಿಲ್ಲೆಯಲ್ಲಿ ನಾಳೆಯಿಂದ ಸಂಜೆ 5 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲಿದೆ. ಮಾಲ್, ಥಿಯೇಟರ್, ಪಬ್, ಬಾರ್, ಹೋಟೆಲ್ ಹೊರತುಪಡಿಸಿ ಎಲ್ಲ ವ್ಯವಹಾರ ಆರಂಭವಾಗಲಿದೆ. ಹೋಟೆಲ್,  ಬಾರ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು