6:38 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಏಳು ದಿನಗಳ ದೈನಂದಿನ ಚಟುವಟಿಕೆಗಳ ಕಾರ್ಯಗಾರ

04/01/2022, 16:06

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಸೇರಿದಂತೆ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏಳು ದಿನಗಳ ವಿಶೇಷ ಕಾರ್ಯಾಗಾರ ತಲಪಾಡಿ ಶಾರದ ಕಾಲೇಜಿನಲ್ಲಿ ನಡೆಯಿತು.

23-12-21ರಂದು ಡಾ.ಸಂದೀಪ್ ಬೇಕಲ್ ಕ್ರಿಯಾ ಶರೀರ ವಿಭಾಗ, ಶಾರದಾ ಆಯುರ್ವೇದ ಕಾಲೇಜು ತಲಪಾಡಿ. ಇವರು ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.


24-12- 21ರಂದು ಕೋವಿಡ್ ಮುಂಜಾಗ್ರತ ಎಚ್ಚರಿಕೆ ಹಾಗೂ ಕ್ರಮಗಳ ಬಗ್ಗೆ ಸಮೀಕ್ಷೆ ಮೂಲಕ ಜನ ಜಾಗೃತಿಯನ್ನು ಗ್ರಾಮದ ಜನರಿಗೆ ನೀಡಿದರು.
27-12-21ರಂದು ಶ್ರೀಮತಿ ಅರುಣಾ ಕಣ್ಣನ್ ದೈಹಿಕ ಶಿಕ್ಷಕರು ಶಾರದಾ ವಿದ್ಯಾನಿಕೇತನ ತಲಪಾಡಿ. ಇವರು ವಿದ್ಯಾರ್ಥಿಗಳಲ್ಲಿ ಸ್ವಯಂ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು.


28-12-21ರಂದು ಡಾ.ಸ್ವಪ್ನ ಡಿ. ಸಂಹಿತ ಸಿದ್ಧಾಂತ, ಶಾರದಾ ಆಯುರ್ವೇದ ಕಾಲೇಜು ಇವರು. ಸಮತೋಲನ ಆಹಾರದ ಬಗೆಗಿನ ಮಾಹಿತಿಯನ್ನು ನೀಡಿದರು. ಹಾಗೂ 7 ದಿನಗಳ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಕಾಲೇಜಿನ ಸ್ವಚ್ಛತಾ ಕಾರ್ಯಕ್ರಮ, ಶಾಲಾ ಕೈತೋಟ ನಿರ್ಮಾಣ, ಹಾಗೂ ಉಪಹಾರಗೃಹದಲ್ಲಿ ಚಿತ್ರಕಲೆಯ ಮೂಲಕ ಸ್ವಚ್ಛತ ಅಭಿಯಾನದ ಬರಹವನ್ನು ಬರೆದರು.


31-12-21ರಂದು ಮಂಜುನಾಥ್ ಮಲೆನಾಡು ಕಲೆ ಮತ್ತು ಕರಕುಶಲ ವಿಭಾಗ ಶಾರದ ವಿದ್ಯಾನಿಕೇತನ ತಲಪಾಡಿ. ಇವರು ಪೌರಾಣಿಕ ಕಥಾ ಭಾಗದ ತುಣುಕನ್ನು ಅಭಿನಯಿಸಿ ತೋರಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಕಿ ಮತ್ತು ಸುರಕ್ಷತೆಯ ಬಗ್ಗೆ ಶ್ರೀ ಸತ್ಯಜಿತ್ ಫಸ್ಟ್ ನ್ಯೂರೋ ಆಸ್ಪತ್ರೆ ಇವರು ಮಾಹಿತಿ ನೀಡಿದರು.






ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಡಾ.ಮೀನಾ ಜೆ ಪಣಿಕ್ಕರ್ ಇವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಸೂರಾಜ್ ಎಂ ದೇವಾಡಿಗ, ಅಮಿತ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ಶ್ರವಣ್ ಆಚಾರ್ಯ, ಮತ್ತು ದಿಶಾ ಕೆ.ಬಿ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು