2:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಏಳು ದಿನಗಳ ದೈನಂದಿನ ಚಟುವಟಿಕೆಗಳ ಕಾರ್ಯಗಾರ

04/01/2022, 16:06

ಮಂಗಳೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಸೇರಿದಂತೆ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏಳು ದಿನಗಳ ವಿಶೇಷ ಕಾರ್ಯಾಗಾರ ತಲಪಾಡಿ ಶಾರದ ಕಾಲೇಜಿನಲ್ಲಿ ನಡೆಯಿತು.

23-12-21ರಂದು ಡಾ.ಸಂದೀಪ್ ಬೇಕಲ್ ಕ್ರಿಯಾ ಶರೀರ ವಿಭಾಗ, ಶಾರದಾ ಆಯುರ್ವೇದ ಕಾಲೇಜು ತಲಪಾಡಿ. ಇವರು ಪ್ರಥಮ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.


24-12- 21ರಂದು ಕೋವಿಡ್ ಮುಂಜಾಗ್ರತ ಎಚ್ಚರಿಕೆ ಹಾಗೂ ಕ್ರಮಗಳ ಬಗ್ಗೆ ಸಮೀಕ್ಷೆ ಮೂಲಕ ಜನ ಜಾಗೃತಿಯನ್ನು ಗ್ರಾಮದ ಜನರಿಗೆ ನೀಡಿದರು.
27-12-21ರಂದು ಶ್ರೀಮತಿ ಅರುಣಾ ಕಣ್ಣನ್ ದೈಹಿಕ ಶಿಕ್ಷಕರು ಶಾರದಾ ವಿದ್ಯಾನಿಕೇತನ ತಲಪಾಡಿ. ಇವರು ವಿದ್ಯಾರ್ಥಿಗಳಲ್ಲಿ ಸ್ವಯಂ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು.


28-12-21ರಂದು ಡಾ.ಸ್ವಪ್ನ ಡಿ. ಸಂಹಿತ ಸಿದ್ಧಾಂತ, ಶಾರದಾ ಆಯುರ್ವೇದ ಕಾಲೇಜು ಇವರು. ಸಮತೋಲನ ಆಹಾರದ ಬಗೆಗಿನ ಮಾಹಿತಿಯನ್ನು ನೀಡಿದರು. ಹಾಗೂ 7 ದಿನಗಳ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಕಾಲೇಜಿನ ಸ್ವಚ್ಛತಾ ಕಾರ್ಯಕ್ರಮ, ಶಾಲಾ ಕೈತೋಟ ನಿರ್ಮಾಣ, ಹಾಗೂ ಉಪಹಾರಗೃಹದಲ್ಲಿ ಚಿತ್ರಕಲೆಯ ಮೂಲಕ ಸ್ವಚ್ಛತ ಅಭಿಯಾನದ ಬರಹವನ್ನು ಬರೆದರು.


31-12-21ರಂದು ಮಂಜುನಾಥ್ ಮಲೆನಾಡು ಕಲೆ ಮತ್ತು ಕರಕುಶಲ ವಿಭಾಗ ಶಾರದ ವಿದ್ಯಾನಿಕೇತನ ತಲಪಾಡಿ. ಇವರು ಪೌರಾಣಿಕ ಕಥಾ ಭಾಗದ ತುಣುಕನ್ನು ಅಭಿನಯಿಸಿ ತೋರಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಕಿ ಮತ್ತು ಸುರಕ್ಷತೆಯ ಬಗ್ಗೆ ಶ್ರೀ ಸತ್ಯಜಿತ್ ಫಸ್ಟ್ ನ್ಯೂರೋ ಆಸ್ಪತ್ರೆ ಇವರು ಮಾಹಿತಿ ನೀಡಿದರು.






ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಡಾ.ಮೀನಾ ಜೆ ಪಣಿಕ್ಕರ್ ಇವರು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಸೂರಾಜ್ ಎಂ ದೇವಾಡಿಗ, ಅಮಿತ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ಶ್ರವಣ್ ಆಚಾರ್ಯ, ಮತ್ತು ದಿಶಾ ಕೆ.ಬಿ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು