5:22 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಹತ್ಯೆ ; ಕೊಲೆಗೆ ಕಾರಣವಾದ ಹಳೆ ದ್ವೇಷ ?

28/04/2022, 20:46

ಮಂಗಳೂರು (ReporterKarnataka.Com):ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ ಎನ್ನಲಾಗಿದೆ.

ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ದೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯಲ್ಲಿ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು