6:54 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಯೇನಪೊಯ ರಿಸರ್ಚ್ ಸೆಂಟರ್ ಫಾರ್ ಫೈನಾನ್ಸ್ ಆಂಡ್ ಆ್ಯಂಟರ್‌ಪ್ರಿನರ್‌ಶಿಪ್ ಡೆಲವಪ್‌ಮೆಂಟ್ ನಿಂದ 2 ದಿನಗಳ ರಾಷ್ಟ್ರೀಯ ಕಾರ್ಯಾಗಾರ

18/05/2024, 23:05

ಮಂಗಳೂರು(reporterkarnataka.com) ಯೇನಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಯೇನಪೊಯ ರಿಸರ್ಚ್ ಸೆಂಟರ್ ಫಾರ್ ಫೈನಾನ್ಸ್ ಆಂಡ್ ಆ್ಯಂಟರ್‌ಪ್ರಿನರ್‌ಶಿಪ್ ಡೆಲವಪ್‌ಮೆಂಟ್ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಕಾಂಪ್ರಹೆನ್ಸಿವ್ ಸ್ಟ್ರಾಟಜೀಸ್ ಆ್ಯಂಡ್ ಎಕ್ಸ್‌ಪರ್ಟ್ ಗೈಡೆನ್ಸ್ ಫಾರ್ ಪಬ್ಲಿಕೇಶನ್ ಇನ್ ಟಾಪ್ ಟೈಯರ್ ಜರ್ನಲ್ಸ್- ರಿಸರ್ಚ್ ಡಿಸೈನ್ ಆಂಡ್ ಮಲ್ಟಿವೇರಿಯೇಟ್ ಅನಾಲಿಸಿಸ್- ಹ್ಯಾಂಡ್ಸ್ ಆನ್ ಪ್ರ್ಯಾಕ್ಟೀಸ್ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಯಿತು. ನಬಾರ್ಡ್‌ನ ಘಟಕವಾಗಿರುವ ಬ್ಯಾಂಕರ್ಸ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಜಂಟಿ ನಿರ್ದೇಶಕ ವಿ.ಎಸ್.ಬಾಲಸುಬ್ರಮಣಿಯನ್ ಅವರು ಉದ್ಘಾಟಿಸಿದರು. ಕೋಯಿಕ್ಕೋಡ್ ಐಐಎಂನ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಜೇಶ್ ಎಸ್. ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲ ಪ್ರೊ. ಅರುಣ್ ಭಾಗವತ್ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ. ಶರೀನಾ ಪಿ., ಡಾ. ಜೀವನ್ ರಾಜ್, ಯೆನ್‌ರಿಫೈನ್ಡ್ ಸಂಯೋಜಕ ಡಾ. ನಿಯಾಝ್ ಪನಕಜೆ ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕ ಡಾ. ಪ್ರಶಾಂತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಮಹಮ್ಮದ್ ಶಾಹಿದ್ ವಂದಿಸಿದರು.
ಸಮಾರೋಪ ಸಮಾರಂಭದಲ್ಲಿ ಪ್ರಾಂಶುಪಾಲರು ಕಾರ್ಯಾಗಾರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು
ಸಂಶೋಧನಾ ಸಹಾಯಕ ಡಾ. ಅಭಿನಂದನ್ ಕುಲಾಲ್ ಅವರ ಉಸ್ತುವಾರಿಯಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಕೇರಳ, ಗೋವಾ, ಪಾಂಡಿಚೇರಿ, ತಮಿಳುನಾಡು, ಕೋಲ್ಕತ್ತಾ ಮೊದಲಾದ ಕಡೆಗಳ 102 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಡಾ. ಶಕೀರಾ ಇರ್ಫಾನ್, ಸ್ವಾಗತಿಸಿದರು.
ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥೆ ನೀಕ್ಷಿತಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು