11:22 AM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಯೇನಪೊಯ ರಿಸರ್ಚ್ ಸೆಂಟರ್ ಫಾರ್ ಫೈನಾನ್ಸ್ ಆಂಡ್ ಆ್ಯಂಟರ್‌ಪ್ರಿನರ್‌ಶಿಪ್ ಡೆಲವಪ್‌ಮೆಂಟ್ ನಿಂದ 2 ದಿನಗಳ ರಾಷ್ಟ್ರೀಯ ಕಾರ್ಯಾಗಾರ

18/05/2024, 23:05

ಮಂಗಳೂರು(reporterkarnataka.com) ಯೇನಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಯೇನಪೊಯ ರಿಸರ್ಚ್ ಸೆಂಟರ್ ಫಾರ್ ಫೈನಾನ್ಸ್ ಆಂಡ್ ಆ್ಯಂಟರ್‌ಪ್ರಿನರ್‌ಶಿಪ್ ಡೆಲವಪ್‌ಮೆಂಟ್ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಕಾಂಪ್ರಹೆನ್ಸಿವ್ ಸ್ಟ್ರಾಟಜೀಸ್ ಆ್ಯಂಡ್ ಎಕ್ಸ್‌ಪರ್ಟ್ ಗೈಡೆನ್ಸ್ ಫಾರ್ ಪಬ್ಲಿಕೇಶನ್ ಇನ್ ಟಾಪ್ ಟೈಯರ್ ಜರ್ನಲ್ಸ್- ರಿಸರ್ಚ್ ಡಿಸೈನ್ ಆಂಡ್ ಮಲ್ಟಿವೇರಿಯೇಟ್ ಅನಾಲಿಸಿಸ್- ಹ್ಯಾಂಡ್ಸ್ ಆನ್ ಪ್ರ್ಯಾಕ್ಟೀಸ್ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಯಿತು. ನಬಾರ್ಡ್‌ನ ಘಟಕವಾಗಿರುವ ಬ್ಯಾಂಕರ್ಸ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಜಂಟಿ ನಿರ್ದೇಶಕ ವಿ.ಎಸ್.ಬಾಲಸುಬ್ರಮಣಿಯನ್ ಅವರು ಉದ್ಘಾಟಿಸಿದರು. ಕೋಯಿಕ್ಕೋಡ್ ಐಐಎಂನ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಜೇಶ್ ಎಸ್. ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲ ಪ್ರೊ. ಅರುಣ್ ಭಾಗವತ್ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ. ಶರೀನಾ ಪಿ., ಡಾ. ಜೀವನ್ ರಾಜ್, ಯೆನ್‌ರಿಫೈನ್ಡ್ ಸಂಯೋಜಕ ಡಾ. ನಿಯಾಝ್ ಪನಕಜೆ ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕ ಡಾ. ಪ್ರಶಾಂತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಮಹಮ್ಮದ್ ಶಾಹಿದ್ ವಂದಿಸಿದರು.
ಸಮಾರೋಪ ಸಮಾರಂಭದಲ್ಲಿ ಪ್ರಾಂಶುಪಾಲರು ಕಾರ್ಯಾಗಾರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು
ಸಂಶೋಧನಾ ಸಹಾಯಕ ಡಾ. ಅಭಿನಂದನ್ ಕುಲಾಲ್ ಅವರ ಉಸ್ತುವಾರಿಯಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಕೇರಳ, ಗೋವಾ, ಪಾಂಡಿಚೇರಿ, ತಮಿಳುನಾಡು, ಕೋಲ್ಕತ್ತಾ ಮೊದಲಾದ ಕಡೆಗಳ 102 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಡಾ. ಶಕೀರಾ ಇರ್ಫಾನ್, ಸ್ವಾಗತಿಸಿದರು.
ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥೆ ನೀಕ್ಷಿತಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು