8:04 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಎಣ್ಣೆ ಕುಡಿದು ಟೈಟಾಗಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಕುಡುಕರು: ಒಂದೇ ದಿನ 14 ಕಾರ್ಡ್ ಪತ್ತೆ!!

27/01/2024, 11:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮದ್ಯದ ಮತ್ತಲ್ಲಿ ಎಟಿಎಂ ನಲ್ಲಿ ಹಣ ತೆಗೆಯೋ ಜನರು ಕುಡಿಯೋ ಆತುರದಲ್ಲಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಖಯಾಲಿ ಶುರು ಮಾಡಿಕೊಂಡಿದ್ದಾರೆ. ಕೈಗೆ ಹಣ ಬಂದ ತಕ್ಷಣ ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂ ಮೆಷಿನ್ ನಲ್ಲೇ ಕಾರ್ಡ್ ಬಿಟ್ಟು ಹೋಗುತ್ತಿದ್ದಾರೆ‌. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿ ಕೇಂದ್ರದಲ್ಲಿ ನಿನ್ನೆ ಒಂದೇ ದಿನ ಸುಮಾರು 14 ಕಾರ್ಡ್ ಬಿಟ್ಟು ಹೋಗಿದ್ದಾರೆ. ಅದರಲ್ಲಿ ಸಂಜೆ ವೇಳೆಯೇ ಹೆಚ್ಚು. ಬಣಕಲ್ ಗ್ರಾಮದ ಕರ್ನಾಟಕ ಬ್ಯಾಂಕ್ ಎಟಿಎಂ ಮುಂಭಾಗವೇ ಬಾರ್ ಅಂಡ್ ರೆಸ್ಟೋರೆಂಟ್ ಇದೆ. ಬಾರ್ ಗೆ ಬರುವ ಮದ್ಯಪ್ರಿಯರು ಕುಡಿದು ಟೈಟಾದ ಬಳಿಕ ಮತ್ತಷ್ಟು ಎಣ್ಣೆ ಬೇಕು ಅಂತ ಎಟಿಎಂ ಹೋಗಿ ಹಣ ತೆಗೆದುಕೊಂಡು ಕಾರ್ಡ್ ಅಲ್ಲೇ ಬಿಟ್ಟು ಮತ್ತೆ ಬಾರ್ ನತ್ತ ಮುಖ ಮಾಡುತ್ತಿದ್ದಾರೆ. ಎಟಿಎಂ ಗೆ ಹೋಗುವ ಇತರೇ ಜನ ಎಟಿಎಂ ತೆಗೆದು ಅಲ್ಲೇ ಇಟ್ಟು ಅವರು ಹಣ ತೆಗೆದುಕೊಂಡು ಹೋಗುತ್ತಿದ್ದಾರೆ. ಹೀಗೆ ಎಟಿಎಂ ಕೇಂದ್ರದ ರ್ಯಾಲ್ ಮೇಲೆ ಜೋಡಿಸಿದ ಎಟಿಎಂಗಳ ಸಂಖ್ಯೆ 10ಕ್ಕೂ ಹೆಚ್ಚು. ಸ್ಥಳಿಯರು ಬ್ಯಾಂಕಿಗೆ ಹೋದಾಗ ಎಲ್ಲವನ್ನೂ ಕೈನಲ್ಲಿ ಹಿಡಿದು ಫೋಟೋ ತೆಗೆಸಿಕೊಂಡು ಮದ್ಯಪ್ರಿಯರ ಎಣ್ಣೆ ಪ್ರೀತಿಯನ್ನ ವ್ಯಂಗ್ಯವಾಡಿದ್ದಾರೆ. ಹೀಗೆ ಬಿಟ್ಟು ಹೋಗುವವರು ಮರು ದಿನ ಬಂದು ಎಟಿಎಂ ನಲ್ಲಿ ಕಾರ್ಡ್ ಹುಡುಕಾಡಿದ ಪ್ರಸಂಗವೂ ನಡೆದಿದೆ. ಸಿಕ್ಕರೆ ಓಕೆ. ಸಿಗದಿದ್ದರೆ ಮತ್ತೆ ಬ್ಯಾಂಕಿಗೆ ಹೋಗಿ ಎಟಿಎಂ ಲಾಕ್ ಮಾಡಿಸಿ ಬೇರೆ ಎಟಿಎಂ ಬರೋವರೆಗೂ ಕಾಯುತ್ತಾರೆ. ಈ ರೀತಿಯ ಸನ್ನಿವೇಶಗಳು ನಡೆದಿವೆ. ಆದರೆ, ಹೊತ್ತಲ್ಲದ ಹೊತ್ತಲ್ಲಿ ಎಮರ್ಜೆನ್ಸ್ ಹಣ ಬೇಕಾದಾಗ ಖಾತೆಯಲ್ಲಿ ಹಣ ಇದ್ದರೂ ತೆಗೆಲು ಆಗದೆ ಪರದಾಡಿದವರು ಇದ್ದಾರೆ. ಇವತ್ತು ತಂತ್ರಜ್ಞಾನ ಸಾಕಷ್ಟು ಮುಂದುವರೆದಿದೆ. ಎಣ್ಣೆ ಕುಡಿಯೋ ಆಸೆಗೆ ಕಾರ್ಡ್ ಬಿಟ್ಟು ಹೋಗೋರ ಕಾರ್ಡ್ ಗಳನ್ನ ಬೇರೆಯವರು ತೆಗೆದುಕೊಂಡು ಖಾತೆಯಲ್ಲಿರುವ ಹಣವನ್ನ ತೆಗೆದುಕೊಳ್ಳುವ ಸಾಧ್ಯತೆಯೂ ಹೆಚ್ಚಿರುತ್ತೆ. ಹಾಗಾಗಿ, ಮದ್ಯ ಪ್ರಿಯರು ಮದ್ಯ ಕುಡಿಯಲಿ. ಆದರೆ, ತಮ್ಮ ವಸ್ತುಗಳ ಬಗ್ಗೆ ಎಚ್ಚರವಿರಲಿ ಎಂದು ಸ್ಥಳೀಯರು ಕೂಡ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು