1:25 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ: ಡಾ. ಪ್ರಭಾಕರ್ ಭಟ್ ಉದ್ಫಾಟನೆ

28/02/2023, 19:35

ಬಂಟ್ವಾಳ(reporterkarnataka.com):
ಕೇಸರಿಯ ಗುರುತೆ ತ್ಯಾಗ ಮತ್ತು ಸೇವೆ. ಆದುದರಿಂದ ತಮ್ಮ ಸಂಘಟನೆಯ ಹೆಸರಿಗೆ ತಕ್ಕಂತೆ ಹಿಂದೂ ಸಮಾಜದ ಉದ್ಧಾರಕ್ಕಾಗಿ ತ್ಯಾಗ ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಅವರು ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ವನ್ನು ದ್ವೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿ ಮಾತನಾಡಿದರು.


ಹಿಂದೂ ಸಮಾಜ ಜಾತಿಭೇದ ಬಿಟ್ಟು ಒಂದಾಗಬೇಕು. ಯುವ ಕೇಸರಿ ಫ್ರೆಂಡ್ಸ್ ಸಂಘಟನೆಯು ಕನಿಷ್ಠ ಪಕ್ಷ ತಮ್ಮ ಗ್ರಾಮ ವ್ಯಾಪ್ತಿ ಯಲ್ಲಿ ಆದರೂ ಹಿಂದೂ ಸಮಾಜದ ಯಾವುದೇ ಒಂದು ಮನೆ ಮುಳಿಹುಲ್ಲಿನ ಮನೆ, ವಿದ್ಯುತ್ ಶಕ್ತಿ ಇಲ್ಲದ ಮನೆ, ಕನಿಷ್ಠ ಪಕ್ಷ ಮನೆಯಲ್ಲಿರುವ ವಿದ್ಯಾರ್ಥಿಗಳು ಪಿಯುಸಿ ತನಕ ವಿದ್ಯಾಭ್ಯಾಸ, ಯಾವುದೇ ರೋಗ ಬಾದೆಯಿಂದ ಔಷಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇರದಂತೆ ಇರುವಂತೆ ನೋಡಿಕೊಳ್ಳಬೇಕು, ಸಮಾಜದ ಒಳಿತಿದಗಾಗಿ ರಕ್ತದಾನ,ಕಣ್ಣು ದಾನ, ಅಂಗಾಂಗ ದಾನಗಳ ಬಗ್ಗೆ ಪ್ರಚೋದಿಸಿ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಬೇಕು, ಆಧುನಿಕ ಆಡಂಬರಗಳನ್ನು ಬಿಟ್ಟು ಭಜನೆ ಸತ್ಕಾರ್ಯಗಳಂತ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು, ಕಾರ್ಯಕ್ರಮದ ಸಂಘಟಕರು ಕಟ್ಟಡ ಲೋಕಾರ್ಪಣೆಯ ನಿಮಿತ್ತ ಯಾವುದೇ ಆಡಂಬರ ಕಾರ್ಯಕ್ರಮ ಮಾಡದೆ ಧಾರ್ಮಿಕ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಅನ್ನದಾನ ದ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು,

ಇತ್ತೀಚಿನ ಸುದ್ದಿ

ಜಾಹೀರಾತು