2:43 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ: ಡಾ. ಪ್ರಭಾಕರ್ ಭಟ್ ಉದ್ಫಾಟನೆ

28/02/2023, 19:35

ಬಂಟ್ವಾಳ(reporterkarnataka.com):
ಕೇಸರಿಯ ಗುರುತೆ ತ್ಯಾಗ ಮತ್ತು ಸೇವೆ. ಆದುದರಿಂದ ತಮ್ಮ ಸಂಘಟನೆಯ ಹೆಸರಿಗೆ ತಕ್ಕಂತೆ ಹಿಂದೂ ಸಮಾಜದ ಉದ್ಧಾರಕ್ಕಾಗಿ ತ್ಯಾಗ ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಅವರು ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ವನ್ನು ದ್ವೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿ ಮಾತನಾಡಿದರು.


ಹಿಂದೂ ಸಮಾಜ ಜಾತಿಭೇದ ಬಿಟ್ಟು ಒಂದಾಗಬೇಕು. ಯುವ ಕೇಸರಿ ಫ್ರೆಂಡ್ಸ್ ಸಂಘಟನೆಯು ಕನಿಷ್ಠ ಪಕ್ಷ ತಮ್ಮ ಗ್ರಾಮ ವ್ಯಾಪ್ತಿ ಯಲ್ಲಿ ಆದರೂ ಹಿಂದೂ ಸಮಾಜದ ಯಾವುದೇ ಒಂದು ಮನೆ ಮುಳಿಹುಲ್ಲಿನ ಮನೆ, ವಿದ್ಯುತ್ ಶಕ್ತಿ ಇಲ್ಲದ ಮನೆ, ಕನಿಷ್ಠ ಪಕ್ಷ ಮನೆಯಲ್ಲಿರುವ ವಿದ್ಯಾರ್ಥಿಗಳು ಪಿಯುಸಿ ತನಕ ವಿದ್ಯಾಭ್ಯಾಸ, ಯಾವುದೇ ರೋಗ ಬಾದೆಯಿಂದ ಔಷಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇರದಂತೆ ಇರುವಂತೆ ನೋಡಿಕೊಳ್ಳಬೇಕು, ಸಮಾಜದ ಒಳಿತಿದಗಾಗಿ ರಕ್ತದಾನ,ಕಣ್ಣು ದಾನ, ಅಂಗಾಂಗ ದಾನಗಳ ಬಗ್ಗೆ ಪ್ರಚೋದಿಸಿ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಬೇಕು, ಆಧುನಿಕ ಆಡಂಬರಗಳನ್ನು ಬಿಟ್ಟು ಭಜನೆ ಸತ್ಕಾರ್ಯಗಳಂತ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು, ಕಾರ್ಯಕ್ರಮದ ಸಂಘಟಕರು ಕಟ್ಟಡ ಲೋಕಾರ್ಪಣೆಯ ನಿಮಿತ್ತ ಯಾವುದೇ ಆಡಂಬರ ಕಾರ್ಯಕ್ರಮ ಮಾಡದೆ ಧಾರ್ಮಿಕ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಅನ್ನದಾನ ದ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು,

ಇತ್ತೀಚಿನ ಸುದ್ದಿ

ಜಾಹೀರಾತು