2:38 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ: ಡಾ. ಪ್ರಭಾಕರ್ ಭಟ್ ಉದ್ಫಾಟನೆ

28/02/2023, 19:35

ಬಂಟ್ವಾಳ(reporterkarnataka.com):
ಕೇಸರಿಯ ಗುರುತೆ ತ್ಯಾಗ ಮತ್ತು ಸೇವೆ. ಆದುದರಿಂದ ತಮ್ಮ ಸಂಘಟನೆಯ ಹೆಸರಿಗೆ ತಕ್ಕಂತೆ ಹಿಂದೂ ಸಮಾಜದ ಉದ್ಧಾರಕ್ಕಾಗಿ ತ್ಯಾಗ ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಅವರು ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು (ರಿ) ಇದರ ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ವನ್ನು ದ್ವೀಪ ಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿ ಮಾತನಾಡಿದರು.


ಹಿಂದೂ ಸಮಾಜ ಜಾತಿಭೇದ ಬಿಟ್ಟು ಒಂದಾಗಬೇಕು. ಯುವ ಕೇಸರಿ ಫ್ರೆಂಡ್ಸ್ ಸಂಘಟನೆಯು ಕನಿಷ್ಠ ಪಕ್ಷ ತಮ್ಮ ಗ್ರಾಮ ವ್ಯಾಪ್ತಿ ಯಲ್ಲಿ ಆದರೂ ಹಿಂದೂ ಸಮಾಜದ ಯಾವುದೇ ಒಂದು ಮನೆ ಮುಳಿಹುಲ್ಲಿನ ಮನೆ, ವಿದ್ಯುತ್ ಶಕ್ತಿ ಇಲ್ಲದ ಮನೆ, ಕನಿಷ್ಠ ಪಕ್ಷ ಮನೆಯಲ್ಲಿರುವ ವಿದ್ಯಾರ್ಥಿಗಳು ಪಿಯುಸಿ ತನಕ ವಿದ್ಯಾಭ್ಯಾಸ, ಯಾವುದೇ ರೋಗ ಬಾದೆಯಿಂದ ಔಷಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇರದಂತೆ ಇರುವಂತೆ ನೋಡಿಕೊಳ್ಳಬೇಕು, ಸಮಾಜದ ಒಳಿತಿದಗಾಗಿ ರಕ್ತದಾನ,ಕಣ್ಣು ದಾನ, ಅಂಗಾಂಗ ದಾನಗಳ ಬಗ್ಗೆ ಪ್ರಚೋದಿಸಿ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸಬೇಕು, ಆಧುನಿಕ ಆಡಂಬರಗಳನ್ನು ಬಿಟ್ಟು ಭಜನೆ ಸತ್ಕಾರ್ಯಗಳಂತ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು, ಕಾರ್ಯಕ್ರಮದ ಸಂಘಟಕರು ಕಟ್ಟಡ ಲೋಕಾರ್ಪಣೆಯ ನಿಮಿತ್ತ ಯಾವುದೇ ಆಡಂಬರ ಕಾರ್ಯಕ್ರಮ ಮಾಡದೆ ಧಾರ್ಮಿಕ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಅನ್ನದಾನ ದ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು,

ಇತ್ತೀಚಿನ ಸುದ್ದಿ

ಜಾಹೀರಾತು