3:09 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಏರುತ್ತಿರುವ ತಾಪಮಾನ: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು; ಊರು ತುಂಬಾ ಮೆರವಣಿಗೆ

01/05/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಳೆಯಿಲ್ಲದೆ ಬಿರು ಬಿಸಿಲ ಬೇಗೆಗೆ ತತ್ತರಿಸಿದ ಜನರು ಕಪ್ಪೆಗೆ ಮದುವೆ ಮಾಡಿಸಿದ ಪ್ರಸಂಗ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು,ನಂತರ ಕಪ್ಪೆಗಳ ಮೆರವಣಿಗೆ ನಡೆಸಲಾಯಿತು.
ಬತ್ತಿಹೋದ ಕೆರೆಕಟ್ಟೆಗಳು ಅಂತರ್ಜಲವಿಲ್ಲದೆ ಖಾಲಿ, ಖಾಲಿ ನಿಂತಿರುವ ಬೋರ್ ವೆಲ್ ಗಳಿಂದ ಅಯೋಮಯವಾದ ರೈತರ ಬೆಳೆಗಳು ಮತ್ತು ಜೀವನಕ್ಕೆ ಸಂಕಷ್ಟ ಎದುರಾಗಿದೆ.
ಅತೀವ ಉಷ್ಣಾಂಶ ದಿಂದ ಕೂಡಿದ ಬಿಸಿಲ ಬೇಗೆ ತಾಳಲಾರದ ವಯೋವೃದ್ಧರು, ಮಕ್ಕಳು ಮತ್ತು ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.



ಇಂತಹ ಸಂಕಷ್ಟ ದಲ್ಲಿ ಕಪ್ಪೆಗಳ ಮದುವೆ ಮಾಡಿಸಿದರೆ ಮಳೆಯಾಗುತ್ತದೆ ಎಂಬುದು ತಲೆತಲಾಂತರದಿಂದ ನಡೆದುಕೊಂಡು ಬಂದ ಹಿರಿಯರ ವಾಡಿಕೆ ಮತ್ತು ನಂಬಿಕೆಯಾಗಿದೆ. ಅದರಂತೆ
ಕಪ್ಪೆಗಳಿಗೆ ಮದುವೆ ಮಾಡಿಸಲಾಯಿತು. ಬಳಿಕ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ನಡೆದ ಕಪ್ಪೆಗಳ ಮದುವೆ ಮೆರವಣಿಗೆ ನಡೆಸಲಾಯಿತು. ಗ್ರಾಮದ ಬೀದಿ ಬೀದಿಗಳಲ್ಲಿ ತಮಟೆ ವಾದ್ಯಗಳೊಂದಿಗೆ ಕಪ್ಪೆಗಳ ಮೆರವಣಿಗೆ ಮಾಡಿ ಮಳೆಗಾಗಿ ಮಹಾದೇವನ ಪ್ರಾರ್ಥನೆ ಮಾಡಲಾಯಿತು.
ಮೆರವಣಿಗೆಯಲ್ಲಿ ಉಯ್ಯೊ ಉಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಮಳೆಗಾಗಿ ಗ್ರಾಮಸ್ಥರು ಪ್ರಾರ್ಥನೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು