3:16 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಎತ್ತಿನಭುಜ: ಮೀಸಲು ಅರಣ್ಯದಲ್ಲಿ  ಮ್ಯಾರಥಾನ್ ಗೆ ಪರಿಸರಪ್ರಿಯರ ವಿರೋಧ

27/11/2021, 09:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

The Malnad Ultra ಎಂಬ ಸಂಸ್ಥೆಯು ಮೂಡಿಗೆರೆಯ ಎತ್ತಿನಭುಜ ಗುಡ್ಡದ ವ್ಯಾಪ್ತಿಯಲ್ಲಿ ಇಂದಿನಿಂದ ಮ್ಯಾರಥಾನ್ ಅನ್ನು ಆಯೋಜಿಸಿದೆ. 


ಆದರೆ ಈ ಮ್ಯಾರಥಾನ್ ಪಶ್ಚಿಮಘಟ್ಟ ಮೀಸಲು ಅರಣ್ಯದಲ್ಲಿ ಹಾದು ಹೋಗುವುದರಿಂದ ಪರಿಸರ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವ ಉದ್ದೇಶಕ್ಕೆ, ಯಾರ ಉದ್ಧಾರಕ್ಕೆ  ಮಾಹಿತಿಯಂತೆ 500 ಜನರ ಭಾಗವಹಿಸಲಿರುವ  ಮ್ಯಾರಥಾನ್ ಇದು. ಇಷ್ಟೊಂದು ಜನ ಒಟ್ಟಿಗೇ ಚಟುವಟಿಕೆ ಪ್ರಾರಂಭಿಸಿದರೆ ಪರಿಸರ ಸೂಕ್ಷ್ಮ ಪ್ರದೇಶದ ಗತಿಯೇನು !? ಇವರ ಶೌಚ ಕ್ರಿಯೆಯಿಂದಾಗಿ ಅಲ್ಲಿನ ಜಲಮೂಲಗಳು ಕುಲಗೆಟ್ಟು ಹೋಗುವುದಕ್ಕೆ ಯಾರು ಹೊಣೆ ? ಜಿಲ್ಲಾಡಡಳಿತ, ಅರಣ್ಯ ಇಲಾಖೆ ಹೇಗೆ ಇಂತಹ Mega Event ಗೆ ಅನುಮತಿ ನೀಡಿತು.? ನಮ್ಮ ಪ್ರಶ್ನೆಗಳಿಗೆ ಜಿಲ್ಲಾ ಉಪಸಂರಕ್ಷಣಾಧಿಕಾರಿಗಳು ಬರೀ ಹಾರಿಕೆಯ ಉತ್ತರವನ್ನಷ್ಟೇ ನೀಡುತ್ತಿದ್ದಾರೆ. 


ಈ ಮ್ಯಾರಥಾನ್ ನ  ಸಂಚಾಲಕರೇ ಮಾಹಿತಿ ನೀಡಿರುವಂತೆ ಮ್ಯಾರಥಾನ್ ನಲ್ಲಿ ಭಾಗವಹಿಸುವವರಿಗೆ ತಲಾ 3000-3500 ರುಪಾಯಿ  ನಿಗದಿಪಡಿಸಲಾಗಿದೆ. 3000*400 ಜನ ಎಂದುಕೊಂಡರೂ 12 ಲಕ್ಷವಾಯಿತು. ಯಾವುದೋ ಖಾಸಗಿ ಈವೆಂಟ್ ಸಂಸ್ಥೆಗೆ ಲಾಭ ಮಾಡಿಕೊಳ್ಳುವ ಸಲುವಾಗಿ ಜಿಲ್ಲಾಡಳಿತ ಪಶ್ಚಿಮಘಟ್ಟ ವನ್ನು ಧಾರೆಯೆರೆಯಿತಾ ? ಎಂಬ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ

ಇತ್ತೀಚಿನ ಸುದ್ದಿ

ಜಾಹೀರಾತು