2:17 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಎತ್ತಿನಭುಜ: ಮೀಸಲು ಅರಣ್ಯದಲ್ಲಿ  ಮ್ಯಾರಥಾನ್ ಗೆ ಪರಿಸರಪ್ರಿಯರ ವಿರೋಧ

27/11/2021, 09:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

The Malnad Ultra ಎಂಬ ಸಂಸ್ಥೆಯು ಮೂಡಿಗೆರೆಯ ಎತ್ತಿನಭುಜ ಗುಡ್ಡದ ವ್ಯಾಪ್ತಿಯಲ್ಲಿ ಇಂದಿನಿಂದ ಮ್ಯಾರಥಾನ್ ಅನ್ನು ಆಯೋಜಿಸಿದೆ. 


ಆದರೆ ಈ ಮ್ಯಾರಥಾನ್ ಪಶ್ಚಿಮಘಟ್ಟ ಮೀಸಲು ಅರಣ್ಯದಲ್ಲಿ ಹಾದು ಹೋಗುವುದರಿಂದ ಪರಿಸರ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವ ಉದ್ದೇಶಕ್ಕೆ, ಯಾರ ಉದ್ಧಾರಕ್ಕೆ  ಮಾಹಿತಿಯಂತೆ 500 ಜನರ ಭಾಗವಹಿಸಲಿರುವ  ಮ್ಯಾರಥಾನ್ ಇದು. ಇಷ್ಟೊಂದು ಜನ ಒಟ್ಟಿಗೇ ಚಟುವಟಿಕೆ ಪ್ರಾರಂಭಿಸಿದರೆ ಪರಿಸರ ಸೂಕ್ಷ್ಮ ಪ್ರದೇಶದ ಗತಿಯೇನು !? ಇವರ ಶೌಚ ಕ್ರಿಯೆಯಿಂದಾಗಿ ಅಲ್ಲಿನ ಜಲಮೂಲಗಳು ಕುಲಗೆಟ್ಟು ಹೋಗುವುದಕ್ಕೆ ಯಾರು ಹೊಣೆ ? ಜಿಲ್ಲಾಡಡಳಿತ, ಅರಣ್ಯ ಇಲಾಖೆ ಹೇಗೆ ಇಂತಹ Mega Event ಗೆ ಅನುಮತಿ ನೀಡಿತು.? ನಮ್ಮ ಪ್ರಶ್ನೆಗಳಿಗೆ ಜಿಲ್ಲಾ ಉಪಸಂರಕ್ಷಣಾಧಿಕಾರಿಗಳು ಬರೀ ಹಾರಿಕೆಯ ಉತ್ತರವನ್ನಷ್ಟೇ ನೀಡುತ್ತಿದ್ದಾರೆ. 


ಈ ಮ್ಯಾರಥಾನ್ ನ  ಸಂಚಾಲಕರೇ ಮಾಹಿತಿ ನೀಡಿರುವಂತೆ ಮ್ಯಾರಥಾನ್ ನಲ್ಲಿ ಭಾಗವಹಿಸುವವರಿಗೆ ತಲಾ 3000-3500 ರುಪಾಯಿ  ನಿಗದಿಪಡಿಸಲಾಗಿದೆ. 3000*400 ಜನ ಎಂದುಕೊಂಡರೂ 12 ಲಕ್ಷವಾಯಿತು. ಯಾವುದೋ ಖಾಸಗಿ ಈವೆಂಟ್ ಸಂಸ್ಥೆಗೆ ಲಾಭ ಮಾಡಿಕೊಳ್ಳುವ ಸಲುವಾಗಿ ಜಿಲ್ಲಾಡಳಿತ ಪಶ್ಚಿಮಘಟ್ಟ ವನ್ನು ಧಾರೆಯೆರೆಯಿತಾ ? ಎಂಬ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ

ಇತ್ತೀಚಿನ ಸುದ್ದಿ

ಜಾಹೀರಾತು