4:04 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

Yoga in Mangaluru | ಜಗತ್ತಿಗೆ ಭಾರತ ನೀಡಿದ ಕೊಡುಗೆ ಯೋಗ: ಸಂಸದ ಕ್ಯಾ. ಬ್ರಿಜೇಶ್ ಚೌಟ

21/06/2025, 22:36

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಯೋಗವು ಇಡೀ ಜಗತ್ತಿನ ಮನುಕುಲಕ್ಕೆ ಭಾರತ ನೀಡಿದ ಶ್ರೇಷ್ಠವಾದ ಕೊಡುಗೆಯಾಗಿದೆ. ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಶನಿವಾರ ನಗರದ ಪುರಭವನದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಜೀವನ ಪದ್ಧತಿಗೆ ಯೋಗವು ಅತ್ಯುತ್ತಮವಾದ ಸಾಧನವಾಗಿದೆ. ಇಂದು ವಿಶ್ವದ ಎಲ್ಲಾ ಕಡೆಗಳಲ್ಲಿ ಯೋಗ ದಿನಾಚರಣೆ ಮಾಡಲಾಗುತ್ತಿದ್ದು, ಇದು ಜಗತ್ತು ಭಾರತದ ಸಂಸ್ಕೃತಿಗೆ ಕೊಟ್ಟಿರುವ ಗೌರವವಾಗಿದೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ, ಯೋಗ ದಿನ ಭಾರತಕ್ಕೆ ಮಾತ್ರ ಸೀಮಿತವಾಗದೆ 160ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತಿದೆ. ಯೋಗವು ಕೇವಲ ತೋರಿಕೆಗೆ ಸೀಮಿತವಾಗದೆ ನಮ್ಮ ಜೀವನ ಶೈಲಿಯ ಭಾಗವಾಗಬೇಕು. ಪ್ರತಿಯೊಬ್ಬರೂ ಯೋಗವನ್ನು ನಡೆಸಿ ತಮ್ಮ ಜೀವನ ಪದ್ಧತಿ ಉತ್ತಮಗೊಳಿಸಬೇಕು ಎಂದು ಹೇಳಿದರು.




ಸಮಾರಂಭದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ವೈ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ,ಯುವ ಸಬಲೀಕರಣ ಮತ್ತು ಕ್ರೀಡಾ ಅಧಿಕಾರಿ ಪ್ರದೀಪ್ ಡಿಸೋಜಾ, ಲೇಡಿಗೋಷನ್ ಅಧೀಕ್ಷಕ ದುರ್ಗಪ್ರಸಾದ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು.ನಿವೃತ್ತ ಆಯುಷ್ ಅಧಿಕಾರಿ ಡಾ. ದೇವದಾಸ್ ನಿರೂಪಿಸಿದರು. ನಂತರ ಪುರಭವನದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಯೋಗಗುರು ಡಾ. ಗೋಪಾಲಕೃಷ್ಣ ದೇಲಂಪಾಡಿ ಕಾರ್ಯಕ್ರಮದ ನೇತೃತ್ವ ವಹಿಸಿ ಸುಮಾರು 1 ಗಂಟೆಗಳ ಕಾಲ ಯೋಗ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು