5:38 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಯೋಗ ಮಹೋತ್ಸವ: 15 ಸಾವಿರಕ್ಕೂ ಹೆಚ್ಚು ಉತ್ಸಾಹಿಗಳ ಪ್ರದರ್ಶನಕ್ಕೆ ಸಾಕ್ಷಿಯಾದ ಜೈಪುರದ ಶ್ರೀ ಭವಾನಿ ನಿಕೇತನ ಶಿಕ್ಷಾ ಸಮಿತಿ ಮೈದಾನ

02/05/2023, 20:11

ಬೆಂಗಳೂರು(reporterkarnataka.com):ಜೈಪುರದ ಶ್ರೀ ಭವಾನಿ ನಿಕೇತನ ಶಿಕ್ಷಾ ಸಮಿತಿಯ ವಿಸ್ತಾರವಾದ ಮೈದಾನದಲ್ಲಿ 15,000 ಕ್ಕೂ ಹೆಚ್ಚು ಉತ್ಸಾಹಿಗಳು ಗಣ್ಯರೊಂದಿಗೆ ಸಾಮಾನ್ಯ ಯೋಗ ಪ್ರೋಟೋಕಾಲ್ (ಸಿವೈಪಿ) ಅನ್ನು ಪ್ರದರ್ಶಿಸಿದ ಯೋಗ ಮಹೋತ್ಸವವು ಉಲ್ಲಾಸಕರ ವಾತಾವರಣಕ್ಕೆ ಸಾಕ್ಷಿಯಾಯಿತು.
ಯೋಗ ಮಹೋತ್ಸವವು 2023 ರ ಅಂತಾರಾಷ್ಟ್ರೀಯ ಯೋಗ ದಿನದ 50 ದಿನಗಳ ಸ್ಮರಣಾರ್ಥವಾಗಿ ಆಚರಿಸಲಾಯಿತು. ಭಾಗವಹಿಸಿದ ಎಲ್ಲರೂ ಕಾಮನ್ ಯೋಗ ಪ್ರೋಟೋಕಾಲ್ (ಸಿವೈಪಿ) ಅನ್ನು ಸಂಪೂರ್ಣ ಲಯಬದ್ಧ ಮತ್ತು ಸಾಮರಸ್ಯದಿಂದ ಸಮ್ಮೋಹನಗೊಳಿಸುವ ಫಲಿತಾಂಶದೊಂದಿಗೆ ಪ್ರದರ್ಶಿಸಿದರು.
ಯೋಗವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ರಾಜಸ್ಥಾನದ ಗವರ್ನರ್ ಕಲ್‍ರಾಜ್ ಮಿಶ್ರಾ, ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೊವಾಲ್; ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅನೇಕ ಗಣ್ಯರು ಮತ್ತು ಅತಿಥಿಗಳು ಈ ಬೃಹತ್ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಕೇಂದ್ರ ಬಂದರು ಶಿಪ್ಪಿಂಗ್ ಮತ್ತು ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಅವರು, “ಇಂದು, ಯೋಗದ ಶ್ರೀಮಂತ ಪರಂಪರೆಯನ್ನು ಹೊಂದಿರುವ ಈ ಐತಿಹಾಸಿಕ ನಗರ ಜೈಪುರವು ಈ ಯೋಗ ಮಹೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಿದೆ. ನೀವು ಸಾವಿರಾರು ಜನರು ಇಲ್ಲಿ ಸೇರಿರುವುದರಿಂದ, ಯೋಗವನ್ನು ಜನರಲ್ಲಿ ಆರೋಗ್ಯ ಮತ್ತು ಕ್ಷೇಮ ಆಂದೋಲನವನ್ನಾಗಿ ಮಾಡುವ ನಮ್ಮ ಕ್ರಿಯಾತ್ಮಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಕೋನವು ಅಪಾರವಾದ ಉತ್ತೇಜನವನ್ನು ಪಡೆದುಕೊಂಡಿದೆ” ಎಂದು ಬಣ್ಣಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು