1:58 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಯೋಗವನ್ನು  ಶಿಕ್ಷಣದಲ್ಲಿ  ಅಳವಡಿಸಬೇಕು: ಮಂಗಳೂರು ವಿವಿ ಕುಲಪತಿ ಪ್ರೊ. ಯಡಪಡಿತ್ತಾಯ 

21/06/2021, 22:29

ಮಂಗಳೂರು(reporterkarnataka news): ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾ.ಸೇ.ಯೋ. ಕೋಶದ ವತಿಯಿಂದ ಯೋಗ ದಿನಾಚರಣೆ ಜರುಗಿತು. 

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಸ್. ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗ 5 ಆಯಾಮಗಳಲ್ಲಿ ಕ್ಷೇಮಾಭಿವೃದ್ಧಿ ಯನ್ನು ಮಾಡುತ್ತದೆ. ಶಾರೀರಿಕ ಬೆಳವಣಿಗೆ ಮಾನಸಿಕ ಸ್ಥೈರ್ಯ ಆರೋಗ್ಯ ಭಾಗ್ಯ ಬೌದ್ಧಿಕ ಮಟ್ಟದ ಬೆಳವಣಿಗೆ ಸಾಮಾಜಿಕ ಸೌಹಾರ್ದತೆ ಹಾಗೂ ಆಧ್ಯಾತ್ಮಿಕತೆಗೆ  ಪೂರಕವಾಗಿದೆ.  ಇದನ್ನು ಶಿಕ್ಷಣ ದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದರು. 

ಮುಖ್ಯ ಅತಿಥಿಯಾಗಿ ಸಂಸ್ಕೃತ ವಿಶ್ವವಿದ್ಯಾನಿಲಯದ ಪ್ರೊ. ಗಿರೀಶ್ ಚಂದ್ರ ಮಾತನಾಡಿ, ಶರೀರದ  ಮನಸ್ಸಿನ ಆತ್ಮದ ಜೊತೆಗೆ ನಡೆಸುವ ಸಂವಾದವೇ ಯೋಗ ಎಂದರು.
ಗೌರವ ಅತಿಥಿಯಾಗಿ  ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ  ಜಯಂತ ನಡುಬೈಲ್, ಕಾಲೇಜಿನ  ಪ್ರೊ. ಸಂಪತ್ ಶುಭ ಹಾರೈಸಿದರು. 


ಅಕ್ಷಯ ಕಾಲೇಜಿನ ರಾ.ಸೇ.ಯೋ  ವಿದ್ಯಾರ್ಥಿನಿ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಣಮ್ಯ ಯೋಗಾಸನದ ವಿವಿಧ ಭಂಗಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್  ಮಾತನಾಡಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದು ನಮ್ಮ ಭಾರತ. ನಮ್ಮ ಹೆಮ್ಮೆ, ಯೋಗ ಒಂದು ಉತ್ಕೃಷ್ಟ ಜೀವನಶೈಲಿ ಎಂದರು. 
ಕೋವಿಡ್ ನೋಡಲ್ ಅಧಿಕಾರಿಗಳಾದ ಡಾ.ಶೇಸಪ್ಪ ಅಮೀನ್,ವನಿತ್ ಕುಮಾರ್,ಹಾಗೂ ಪ್ರವೀಣ್ ಶೆಟ್ಟಿ, ಯೋಗ ಗುರು ಹೇಮಾ ಚಂದ್ರ ಹಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು