6:02 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಯೋಗವನ್ನು  ಶಿಕ್ಷಣದಲ್ಲಿ  ಅಳವಡಿಸಬೇಕು: ಮಂಗಳೂರು ವಿವಿ ಕುಲಪತಿ ಪ್ರೊ. ಯಡಪಡಿತ್ತಾಯ 

21/06/2021, 22:29

ಮಂಗಳೂರು(reporterkarnataka news): ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾ.ಸೇ.ಯೋ. ಕೋಶದ ವತಿಯಿಂದ ಯೋಗ ದಿನಾಚರಣೆ ಜರುಗಿತು. 

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಸ್. ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗ 5 ಆಯಾಮಗಳಲ್ಲಿ ಕ್ಷೇಮಾಭಿವೃದ್ಧಿ ಯನ್ನು ಮಾಡುತ್ತದೆ. ಶಾರೀರಿಕ ಬೆಳವಣಿಗೆ ಮಾನಸಿಕ ಸ್ಥೈರ್ಯ ಆರೋಗ್ಯ ಭಾಗ್ಯ ಬೌದ್ಧಿಕ ಮಟ್ಟದ ಬೆಳವಣಿಗೆ ಸಾಮಾಜಿಕ ಸೌಹಾರ್ದತೆ ಹಾಗೂ ಆಧ್ಯಾತ್ಮಿಕತೆಗೆ  ಪೂರಕವಾಗಿದೆ.  ಇದನ್ನು ಶಿಕ್ಷಣ ದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದರು. 

ಮುಖ್ಯ ಅತಿಥಿಯಾಗಿ ಸಂಸ್ಕೃತ ವಿಶ್ವವಿದ್ಯಾನಿಲಯದ ಪ್ರೊ. ಗಿರೀಶ್ ಚಂದ್ರ ಮಾತನಾಡಿ, ಶರೀರದ  ಮನಸ್ಸಿನ ಆತ್ಮದ ಜೊತೆಗೆ ನಡೆಸುವ ಸಂವಾದವೇ ಯೋಗ ಎಂದರು.
ಗೌರವ ಅತಿಥಿಯಾಗಿ  ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ  ಜಯಂತ ನಡುಬೈಲ್, ಕಾಲೇಜಿನ  ಪ್ರೊ. ಸಂಪತ್ ಶುಭ ಹಾರೈಸಿದರು. 


ಅಕ್ಷಯ ಕಾಲೇಜಿನ ರಾ.ಸೇ.ಯೋ  ವಿದ್ಯಾರ್ಥಿನಿ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಣಮ್ಯ ಯೋಗಾಸನದ ವಿವಿಧ ಭಂಗಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್  ಮಾತನಾಡಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದು ನಮ್ಮ ಭಾರತ. ನಮ್ಮ ಹೆಮ್ಮೆ, ಯೋಗ ಒಂದು ಉತ್ಕೃಷ್ಟ ಜೀವನಶೈಲಿ ಎಂದರು. 
ಕೋವಿಡ್ ನೋಡಲ್ ಅಧಿಕಾರಿಗಳಾದ ಡಾ.ಶೇಸಪ್ಪ ಅಮೀನ್,ವನಿತ್ ಕುಮಾರ್,ಹಾಗೂ ಪ್ರವೀಣ್ ಶೆಟ್ಟಿ, ಯೋಗ ಗುರು ಹೇಮಾ ಚಂದ್ರ ಹಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು