4:07 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಯೋಗಿ ಭರ್ಜರಿ ಜಯ: ಕದ್ರಿ ಜೋಗಿ ಮಠ ಹರ್ಷಮಯ!!; ದೂರದ ಉತ್ತರ ಪ್ರದೇಶಕ್ಕೂ ದಕ್ಷಿಣದ ಮಂಗಳೂರಿಗೂ ಎತ್ತಣ ಸಂಬಂಧ?

10/03/2022, 20:16

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ದೂರದ ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ ಸಂಭ್ರಮ ಆಚರಿಸಲಾಯಿತು. ಉತ್ತರದ 

ಹಿಮಾಲಯ ತಪ್ಪಲಿನ ಉತ್ತರ ಪ್ರದೇಶಕ್ಕೂ ದಕ್ಷಿಣದ ಮಂಗಳೂರಿಗೂ ಎತ್ತಣ ಸಂಬಂಧ ಎಂದು ನೀವೆಲ್ಲ ತಲೆ ಕೆರೆದುಕೊಳ್ಳಬಹುದು. ಆದರೆ ಸಂಬಂಧ ಇರುವುದರಿಂದಲೇ ಕದ್ರಿಯ ಜೋಗಿ ಮಠದಲ್ಲಿ ಸಂಭ್ರಮ ನೆಲೆಸಿದೆ.

ಆದಿತ್ಯನಾಥ್ ಯೋಗಿ ನೇತೃತ್ವದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಯೋಗಿ ಅವರು ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ. ಇವೆಲ್ಲ ಖುಷಿ ಉತ್ತರ ಪ್ರದೇಶ ಮಾತ್ರವಲ್ಲದೆ ದಕ್ಷಿಣ ಭಾರತದ ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿಯೂ ಮಡುಗಟ್ಟಿ ನಿಂತಿದೆ.

ಯೋಗಿ ಆದಿತ್ಯನಾಥ್‌ ಅವರಿಗೂ  ಮಂಗಳೂರಿಗೂ ಅವಿನಾಭಾವ ಸಂಬಂಧ ಇದೆ. ಯೋಗಿಯವರ ಭರ್ಜರಿ ಗೆಲುವು ಇಲ್ಲಿಯ ಕದ್ರಿಯಲ್ಲಿರುವ ಕದಳಿ ಶ್ರೀ ಯೋಗೇಶ್ವರ (ಜೋಗಿ) ಮಠದಲ್ಲಿ ಸಂಭ್ರಮ ನೆಲೆಸುವಂತೆ ಮಾಡಿದೆ.

ಯೋಗಿ ಆದಿತ್ಯನಾಥ್ ಅವರು ಅಖಿಲ ಭಾರತ ವರ್ಷಿಯ ಅವಧೂತ್ ಯೋಗಿ ಮಹಾ ಸಭಾ ಭೇಕ್ ಭಾರಹ ಪಂಥದ ಮಹಾಂತ್ ಆಗಿದ್ದು, 12
ವರ್ಷಗಳಿಗೊಮ್ಮೆ ನಡೆಯುವ ಮಂಗಳೂರು ಕದ್ರಿಯ ಜೋಗಿ ಮಠದ ಮಠಾಧಿಪತಿ (ರಾಜ) ಗಳ ಆಯ್ಕೆ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಯೋಗಿ ನೇತೃತ್ವದಲ್ಲಿಯೇ ಮಠಾಧಿಪತಿಯ ಆಯ್ಕೆ ನಡೆಯುತ್ತದೆ. ಭಾರಹ ಪಂಥದ ಪದಾಧಿಕಾರಿಗಳ ಸಮ್ಮುಖದಲ್ಲಿ ಕುಂಭಮೇಳದ ಸಮಯದಲ್ಲಿ ನಾಸಿಕ್ ಸಮೀಪದ ತ್ರಯಂಬಕೇಶ್ವರದಲ್ಲಿ 12 ಪಂಗಡಗಳ ಶ್ರೀಗಳು ಮಂಗಳೂರು ಜೋಗಿ  ಮಠದ  ‘ರಾಜ’ವನ್ನು ಆಯ್ಕೆ ಮಾಡುತ್ತಾರೆ.

ಯೋಗಿಯವರು ಆಯ್ಕೆ ಮಾಡಿದ ಬೈರಾಗ್ ಪಂಥದ ಶ್ರೀ ಯೋಗಿ ನಿರ್ಮಲನಾಥ್ ಅವರು ಸದ್ಯ ಜೋಗಿ ಮಠದ ‘ರಾಜ’ನಾಗಿದ್ದಾರೆ. ಜೋಗಿ ಮಠಕ್ಕೆ ಸಾವಿರಕ್ಕೂ ಅಧಿಕ ವರ್ಷಗಳ ಇತಿಹಾಸವಿದೆ. 

ಯೋಗಿಯವರು ಇಲ್ಲಿಯ ತನಕ ಮಂಗಳೂರಿಗೆ 6 ಸಲ ಭೇಟಿ ನೀಡಿದ್ದಾರೆ. ಕರ್ನಾಟಕಕ್ಕೆ ಭೇಟಿ ನೀಡಿದಾಗ ಪ್ರತೀ ಸಂದರ್ಭದಲ್ಲೂ ಅವರು ಜೋಗಿ ಮಠಕ್ಕೆ ಭೇಟಿ ನೀಡುತ್ತಾರೆ. ಈ ವೇಳೆ ವಿಶ್ರಾಂತಿ, ವಾಸ್ತವ್ಯಕ್ಕೆ ಜೋಗಿ ಮಠವನ್ನೇ ಆಶ್ರಯಿಸುತ್ತಾರೆ. ಸಾಮಾನ್ಯರಲ್ಲಿ ಸಾಮಾನ್ಯನಂತೆ ನೆಲದ ಮೇಲೆಯೇ ಪವಡಿಸುತ್ತಾರೆ. ಒಟ್ಟಿನಲ್ಲಿ ಕದ್ರಿ ಜೋಗಿ ಮಠದಲ್ಲಿ ಸಂಭ್ರಮ ನೆಲೆಸುವಂತೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು