3:37 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಎಣ್ಣೆಯ ದಾಸರಾಗುತ್ತಿರುವ ಯುವಪೀಳಿಗೆ: ಮದ್ಯ ಮಾರಾಟ ನಿಲ್ಲಿಸಲು ಗ್ರಾಮಸ್ಥರಿಂದ ಚಾಮುಂಡೇಶ್ವರಿಗೆ ಮೊರೆ

18/09/2025, 13:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎಣ್ಣೆ ಮಾರಾಟ ನಿಲ್ಲಿಸಲು ಮಲೆನಾಡಿನ ಗ್ರಾಮಸ್ಥರು ದೇವರ ಮೊರೆ ಹೋದ ಘಟನೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಂಗಡಿಗಳಲ್ಲಿ ರಾಜಾರೋಷವಾಗಿ ಎಣ್ಣೆ ಮಾರಾಟ ಮಾಡಲಾಗುತ್ತಿದ್ದು,ಕೆಲಸ-ಕಾರ್ಯ ಬಿಟ್ಟು ಕುಡಿತಕ್ಕೆ
ಯುವ ಪೀಳಿಗೆ ದಾಸರಾಗುತ್ತಿದ್ದಾರೆ. ಅಂಗಡಿಯವ್ರು ಎಣ್ಣೆ ಮಾರಬಾರ್ದು, ನಮ್ಮೂರ್ನೋರು ಖರೀದಿಸಬಾರ್ದು ಅಂತ ಗ್ರಾಮಸ್ಥರು ದೇವರ ಮೊರೆ ಹೋಗಿದ್ದಾರೆ. ಗ್ರಾಮಸ್ಥರೆಲ್ಲಾ ಗ್ರಾಮದೇವತೆ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಅಕ್ರಮ ಮದ್ಯ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಏನೂ ಪ್ರಯೋಜನವಿಲ್ಲ ಎಂದು ನಾಗರಿಕರು ದೂರಿದ್ದಾರೆ. ಖಾಕಿಯಿಂದ ಆಗದ ಕೆಲಸವನ್ನು ನೀನೇ ಮಾಡು ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊಸಕೆರೆ ಗ್ರಾಮ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು