11:09 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

20/08/2025, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಹತ್ಯೆ ಮಾಡಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಕುಮಾರ್ (37) ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ತಮ್ಮ ತೋಟದ ಕಾಯಿ ಮುಟ್ಡಿದ್ದಕ್ಕೆ ಹೊಡೆದು ಕೊಂದ ತೋಟದ ಮಾಲೀಕ ಮಧು (37) ಎಂಬಾತ ಕುಮಾರ್ ಅವರನ್ನು ಹೊಡೆದು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.
ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆದುಕೊಂಡು ಹೋಗಿರುವುದಕ್ಕೆ ಮಧು ಈ ಹಿಂದೆ ಸಾಕಷ್ಟು ಬಾರಿ ಕುಮಾರ್ ಗೆ ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ. ನಿನ್ನೆ ಕೂಡ ತೆಂಗಿನಕಾಯಿ ತೆಗೆದುಕೊಂಡು ಹೋಗುವಾಗ ಗಲಾಟೆ ನಡೆದಿದೆ.
ತೋಟದ ಮಾಲೀಕ ಮಧುಗೆ ಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಎನ್ನಲಾಗಿದ್ದು,ಇದರಿಂದ ಆಕ್ರೋಶಗೊಂಡ ಮಧು ಗುದ್ದಲಿಯಿಂದ ಕುಮಾರ್ ಮೇಲೆ ಹಲ್ಲೆ ಮಾಡಿದ್ದ ಎಂದು ತಿಳಿದು ಬಂದಿದೆ.ಹಲ್ಲೆಯಿಂದ ಕುಮಾರ್ ನಿತ್ರಾಣಗೊಂಡು ಅಲ್ಲೆ ಬಿದ್ದಿದ್ದನು. ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದವನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಕುಮಾರ್ ಸಾವನ್ನಪ್ಪಿದ್ದಾನೆ. ಸಖರಾಯಪಟ್ಟಣ ಪೋಲಿಸರಿಂದ ಕೊಲೆ ಆರೋಪಿ ಮಧುವನ್ನು ಬಂಧಿಸಿದ್ದಾರೆ.ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು