4:37 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಂದಿ ಬೆಟ್ಟದ ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು: ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ರಿಯಕರ ಪತ್ತೆ; ಪ್ರಿಯತಮನಿಂದಲೇ ಹತ್ಯೆ?

30/06/2026, 11:58

ಬೆಂಗಳೂರು(reporterkarnataka.com):;ಚಿಕ್ಕಬಳ್ಳಾಪುರದ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದ ಬಳಿಯ ಹೋಂ ಸ್ಟೇವೊಂದರಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಸುರಭಿ ಎಂದು ಆಕೆಯನ್ನು ಗುರುತಿಸಲಾಗಿದ್ದು, ಆಕೆಯ ಪ್ರೇಮಿ ಸಂಜಿತ್​​​ ಅಲಿಯಿಂದ ಕೊಲೆಯಾಗಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗಿದೆ.ಸದ್ಯ ಶಂಕಿತ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.


ಸಾಯಿ ಸುರಭಿ ಬೆಂಗಳೂರಿನಾಕೆ. ಕೇರಳದ ಕೋಝಿಕ್ಕೋಡ್ ನಿವಾಸಿ ಸಂಜಿತ್​​​ ಅಲಿ ಕ್ಯಾಬ್​​​ ಡ್ರೈವರ್​ ಆಗಿ ಜೀವನ ಕಟ್ಟಿಕೊಂಡಿದ್ದ. ಇಬ್ಬರು ಶನಿವಾರ ಹೋಂ ಸ್ಟೇನಲ್ಲಿ ತಂಗಿದ್ದರು. ಸೋಮವಾರ ಚೆಕ್​ಔಟ್​ ಆಗಬೇಕಿತ್ತು. ಎಷ್ಟೇ ಸಮಯ ಕಳೆದರೂ ಹೊರಬರದ ಕಾರಣ ಸಿಬ್ಬಂದಿ ಒಳಗೆ ನುಸುಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸಾಯಿ ಸುರಭಿ ದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು. ರೂಂನಲ್ಲಿ ಮಾತ್ರೆಗಳು ಪತ್ತೆಯಾಗಿದ್ದ ಕಾರಣ, ಇಬ್ಬರು ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಪರ್ಸನಲ್​ ಡೈರಿ ಸಿಕ್ಕಿದ್ದು, ಅದರಲ್ಲಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಇದೇ ಹೊತ್ತಿನಲ್ಲಿ ಮೃತ ಯುವತಿಯ ತಾಯಿ ಗೀತಾ ಮಾಧ್ಯಮಗಳ ಮುಂದೆ ಮಾತನಾಡಿದ್ದು, ಇದೊಂದು ಲವ್​ ಜಿಹಾದ್​ ಕೊಲೆ, ಮಗಳನ್ನು ಡ್ರಗ್​ ಅಡಿಕ್ಟ್​ ಮಾಡಿ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.
ಯುವತಿ ತಾಯಿ ಹೇಳಿದ್ದಿಷ್ಟು ನನ್ನ ಮಗಳು ದಯಾನಂದ ಸಾಗರ ಕಾಲೇಜಿನಲ್ಲಿ ಓದುತ್ತಿದ್ದಳು. ಆಗ ಆಕೆಗೆ ಆತ ಸ್ನೇಹಿತರ ಮುಖೇನ ಪರಿಚಯವಾಗಿದ್ದ. ಪ್ರೀತಿಸು ಎಂದು ಪೀಡಿಸುತ್ತಿದ್ದ ಈ ಬಗ್ಗೆ ನಾನು ಬನಶಂಕರಿ ಹಾಗೂ ಕುಮಾರಸ್ವಾಮಿ ಲೇಔಟ್​ ಪೊಲೀಸ್​ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಆಕೆ ಡ್ರಗ್​ ಅಡಿಕ್ಟ್​ ಆಗುವಂತೆ ಮಾಡಿದ್ದ ಒಮ್ಮೆ ನಾನು ಚಿಕಿತ್ಸೆ ಕೊಡಿಸಿದ್ದೆ ಸರಿಯಾಗಿದ್ದಳು. ಮುದ್ದೇನ ಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದಳು. ಶನಿವಾರ ಸತ್ಸಂಗ ಇದೆ ಎಂದಿದ್ದಳು. ಆತ ನನ್ನ ಮಗಳನ್ನು ಪದೇ ಪದೆ ಹುಡುಕಿ ಬರುತ್ತಿದ್ದ ಎಂದು ಸುರಭಿ ತಾಯಿ ಟಿ.ಆರ್.ಗೀತಾ ದೂರಿದ್ದಾರೆ

*ಪೊಲೀಸರು ಹೇಳಿದ್ದೇನು?*
ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಮಾತನಾಡಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಿದ್ದೇವೆ, ಸಂಜಿತ್​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ. ಸಂಪೂರ್ಣ ಚೇತರಿಸಿಕೊಂಡ ನಂತರ ಘಟನೆ ನಡೆದ ದಿನ ಏನಾಗಿತ್ತು ಎನ್ನುವುದು ಬೆಳಕಿಗೆ ಬರಲಿದೆ. ಮರಣೋತ್ತರ ಪರೀಕ್ಷೆಗಾಗಿ ಯುವತಿ ಮೃತದೇಹವನ್ನು ರವಾನಿಸಲಾಗಿದೆ. ವರದಿ ಬಂದ ನಂತರ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು