11:04 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಯೂತ್ ಬಿಲ್ಲವ ಕಾರ್ಕಳ: ನೂತನ ಅಧ್ಯಕ್ಷ ಸುಕೇಶ್ ಕರ್ಕೇರ, ಕಾರ್ಯದರ್ಶಿ ಪ್ರಮಿತ್ ಸುವರ್ಣ ಪದಗ್ರಹಣ

16/07/2023, 19:35

ಕಾರ್ಕಳ(reporterkarnataka.com); ಯೂತ್‌ ಬಿಲ್ಲವ ಕಾರ್ಕಳ ಸಂಘಟನೆಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು.
ನೂತನ ಅಧ್ಯಕ್ಷರಾಗಿ ಸುಕೇಶ್‌ ಕರ್ಕೇರ, ಕಾರ್ಯದರ್ಶಿಯಾಗಿ ಪ್ರಮಿತ್‌ ಸುವರ್ಣ, ಗೌರವಾಧ್ಯಕ್ಷರಾಗಿ ಭಾಸ್ಕರ್‌ ಎಸ್.‌ ಕೋಟ್ಯಾನ್‌ ಹಾಗೂ ಡಿ. ಆರ್.‌ ರಾಜು, ಕೋಶಾಧಿಕಾರಿಯಾಗಿ ಶರತ್‌ ಪೂಜಾರಿ ಬೈಲಡ್ಕ, ಉಪಾಧ್ಯಕ್ಷರಾಗಿ ರವಿರಾಜ್‌ ಪೂಜಾರಿ, ರಿತೇಶ್‌ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್‌, ಲೆಕ್ಕ ಪರಿಶೋಧಕರಾಗಿ ಶರತ್‌ ಸಾಣೂರು, ಕ್ರೀಡಾ ಕಾರ್ಯದರ್ಶಿಯಾಗಿ ಸಾಯಿ ಕಿರಣ್‌ ಮತ್ತು ಶಮಿತ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಜಿತ್‌ ನಿಟ್ಟೆ ಮತ್ತು ಸವಿನ್‌ ಪೂಜಾರಿ ಅಧಿಕಾರ ಸ್ವೀಕರಿಸಿದರು. ಜೂ. 18ರಂದು ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಸಂಘಟನೆಯ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು.
ಈ ಸಂದರ್ಭ ಸಂಘಟನೆಯ ಗೌರವಾಧ್ಯಕ್ಷ ಭಾಸ್ಕರ್‌ ಎಸ್‌. ಕೋಟ್ಯಾನ್‌, ವಾಸ್ತು ತಜ್ಞ ಪ್ರಮಲ್‌ ಕುಮಾರ್‌, ಬೈಲಡ್ಕ ಗರಡಿ ಮನೆಯ ವಿನಾಯಕ ಚಂದರ್‌, ಶಿಕ್ಷಕ ವಸಂತ ಎಂ., ಪಿಡಬ್ಲ್ಯೂಡಿ ಕಾಂಟ್ರಾಕ್ಟರ್‌ ಸುಭಾಶ್‌ ಸುವರ್ಣ, ಸ್ಥಾಪಕಾಧ್ಯಕ್ಷ ಭರತ್‌ ಸಿ. ಅಂಚನ್‌ ಮತ್ತು ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು