11:42 PM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಬಂಧನ; ಜಾಮೀನು

04/02/2023, 17:11

ಮಂಗಳೂರು(reporterkarnataka.com) : ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾರು ಚಲಾಯಿಸುತ್ತಿದ್ದ ಪ್ರಸಿದ್ಧ ಯೂಟ್ಯೂಬರ್ ಅರ್ಪಿತ್ ಬಂಧನವಾಗಿದ್ದು, ಜಾಮೀನು ಕೂಡ ದೊರೆತಿದೆ.

ಕಳೆದ ಮಂಗಳವಾರ ಮುಲ್ಕಿ ಸಮೀಪ ನಡೆದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದ್ದು, ಕರಾವಳಿಯ ಖ್ಯಾತ ಯೂಟ್ಯೂಬರ್ ಅರ್ಪಿತ್ ಎಂಬವರನ್ನು
ಪೋಲಿಸರು ಬಂಧಿಸಿದ್ದರು.
ಬಂಧಿತ ಆರೋಪಿ ಯೂಟ್ಯೂಬರ್ ಆಗಿದ್ದು,
ಹಳೆಯಂಗಡಿ ಸಮೀಪದ ಇಂದ್ರನಗರ ನಿವಾಸಿ.
ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದರು.
ಮಧ್ಯ ಪ್ರದೇಶದ ಇಂದೋರ್ ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯ ಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು.‌ಈ ವೇಳೆ ಹೆದ್ದಾರಿಯಲ್ಲಿ ಉಡುಪು ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತ ರಭಸಕ್ಕೆ ಬಬುಲು ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಇನ್ನೋರ್ವ ಅಚಲ್ ಸಿಂಗ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇನ್ನೋರ್ವ ಗಾಯಾಳು ಅನಿಶ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಮೂವರಿಗೆ ಡಿಕ್ಕಿ ಹೊಡೆದ ಕಾರು ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು