4:27 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಬಂಧನ; ಜಾಮೀನು

04/02/2023, 17:11

ಮಂಗಳೂರು(reporterkarnataka.com) : ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾರು ಚಲಾಯಿಸುತ್ತಿದ್ದ ಪ್ರಸಿದ್ಧ ಯೂಟ್ಯೂಬರ್ ಅರ್ಪಿತ್ ಬಂಧನವಾಗಿದ್ದು, ಜಾಮೀನು ಕೂಡ ದೊರೆತಿದೆ.

ಕಳೆದ ಮಂಗಳವಾರ ಮುಲ್ಕಿ ಸಮೀಪ ನಡೆದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದ್ದು, ಕರಾವಳಿಯ ಖ್ಯಾತ ಯೂಟ್ಯೂಬರ್ ಅರ್ಪಿತ್ ಎಂಬವರನ್ನು
ಪೋಲಿಸರು ಬಂಧಿಸಿದ್ದರು.
ಬಂಧಿತ ಆರೋಪಿ ಯೂಟ್ಯೂಬರ್ ಆಗಿದ್ದು,
ಹಳೆಯಂಗಡಿ ಸಮೀಪದ ಇಂದ್ರನಗರ ನಿವಾಸಿ.
ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದರು.
ಮಧ್ಯ ಪ್ರದೇಶದ ಇಂದೋರ್ ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯ ಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು.‌ಈ ವೇಳೆ ಹೆದ್ದಾರಿಯಲ್ಲಿ ಉಡುಪು ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತ ರಭಸಕ್ಕೆ ಬಬುಲು ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಇನ್ನೋರ್ವ ಅಚಲ್ ಸಿಂಗ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇನ್ನೋರ್ವ ಗಾಯಾಳು ಅನಿಶ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಮೂವರಿಗೆ ಡಿಕ್ಕಿ ಹೊಡೆದ ಕಾರು ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು