12:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ: ರಾಜ್ಯಮಟ್ಟದ ಯುವ ಜನೋತ್ಸವದಲ್ಲಿ ಮುಖ್ಯಮಂತ್ರಿ

05/01/2025, 20:37

*ದುಷ್ಟ ಶಕ್ತಿಗಳು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿಯಿರಿ: ಸಿ.ಎಂ ಕರೆ*

ದಾವಣಗೆರೆ(reporterkarnataka.com): ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿದು ತಮ್ಮ ಬದುಕು-ಭವಿಷ್ಯ ಕಾಪಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಜಿಲ್ಲಾಡಳಿತ ಆಯೋಜಿಸಿದ್ದ ರಾಜ್ಯಮಟ್ಟದ ಯುವ ಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ. ಇದಕ್ಕಾಗಿ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾನ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾಜದ ಪ್ರಗತಿಗೆ ಕಾರಣರಾಗಬೇಕು ಎಂದರು.
ನಾವು ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಯುವ ಜನತೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂವಿಧಾನದ ಸಾರ ಪ್ರತಿಯೊಬ್ಬರಿಗೂ ಅರ್ಥ ಆಗಬೇಕು. ಪ್ರತೀ ಪ್ರಜೆಗೂ ಅರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಪ್ರತಿಯೊಬ್ಬರಿಗೂ ಅವರವರ ಧರ್ಮ ನಂಬಿಕೆಯ ಆಚರಣೆಗೆ ಅವಕಾಶ ಇರಬೇಕು ಎನ್ನುವುದೇ ಸಂವಿಧಾನದ ಸಾರ. ಈ ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಆದ್ದರಿಂದ ಈ ಸಂವಿಧಾನವನ್ನು ಕಾಪಾಡುವುದೇ ನಮ್ಮ ಜವಾಬ್ದಾರಿ ಎಂದರು.


ದೇಶ ನಮಗೇನು ಕೊಟ್ಟಿತು ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದೇ ನಮಗೆ ಮುಖ್ಯವಾಗಬೇಕು. ಅನೇಕ ದುಷ್ಟ ಶಕ್ತಿಗಳು ದೇಶದ ನೆಮ್ಮದಿ ಕೆಡಿಸಲು, ಪ್ರಗತಿ ಹಾಳು ಮಾಡಲು ಕೆಲವರು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿದು ಮನುಷತ್ಯ ಬೆಳೆಸಿಕೊಂಡು, ಸಮಾಜಮುಖಿಯಾಗಿ ಬೆಳೆಯಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲು ಸಾಧ್ಯ ಎಂದರು.
ಒಂದು ಲಕ್ಷದ 62 ಸಾವಿರ ಮಂದಿ ಯುವ ಜನತೆಯ ಖಾತೆಗೆ ಯುವನಿಧಿ ಹಣ ವರ್ಗಾವಣೆ ಮಾಡಿ, ಇವರಿಗೆ ಸ್ಕಿಲ್ ತರಬೇತಿಯನ್ನೂ ನೀಡುತ್ತಿದ್ದೇವೆ. ಇದಕ್ಕಾಗಿ 213 ಕೋಟಿ ಹಣ ಕೊಟ್ಟಿದ್ದೇವೆ. ವಿದ್ಯಾವಂತ ನಿರುದ್ಯೋಗಿ ಪದವೀಧರರ ನೆರವಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು ಎನ್ನುವ ಸಂಕಲ್ಪದಿಂದ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.

*ರಾಜ್ಯದ ಸಮೃದ್ಧಿ-ಶಾಂತಿಗಾಗಿ ಹಾರೈಸಿದ ಸಿಎಂ:*

ಹೊಸ ವರ್ಷಕ್ಕೆ ಶುಭಾಶಯ ಕೋರುವ ಮೂಲಕ ಮಾತು ಆರಂಭಿಸಿದ ಸಿಎಂ, ರಾಜ್ಯದ ಸಮೃದ್ಧಿ-ಶಾಂತಿಗಾಗಿ ಹಾರೈಸಿದರು. ಯುವ ಜನತೆ ಸಂಭ್ರಮದಿಂದ ಹೊಸ ವರ್ಷ ಬರ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳುವ ಗಮನ ಹರಿಸಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು