10:49 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಯುದ್ಧಪೀಡಿತ ಉಕ್ರೇನ್‌ನಿಂದ ಇಬ್ಬರು ದಾವಣಗೆರೆ ವಿದ್ಯಾರ್ಥಿಗಳು ಮನೆಗೆ ವಾಪಸ್:  ಇನ್ನು 3 ಮಂದಿ ತಾಯಿನಾಡಿನತ್ತ

27/02/2022, 14:12

ಸತ್ಯಪ್ರಕಾಶ್ ಜಾಧವ್ ದಾವಣಗೆರೆ

info.reporterkarnataka@gmail.com

ಉಕ್ರೇನ್- ರಷ್ಯಾ ಯುದ್ಧದ  ಹಿನ್ನೆಲೆಯಲ್ಲಿ ಅನಿಶ್ಚಿತತೆಯಲ್ಲಿ ಸಿಲುಕಿದ್ದ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆ ತಲುಪಿದ್ದು, ಮನೆ ಮಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ನಡುವೆ ವಿಜಯಪುರ ಜಿಲ್ಲೆಯ 13 ವಿದ್ಯಾರ್ಥಿಗಳು ಇನ್ನೂ ಪೂರ್ವ ಯೂರೋಪಿಯನ್ ದೇಶದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರು ಮೆಟ್ರೋದ ನೆಲ ಮಾಳಿಗೆಯಲ್ಲಿ ಸದ್ಯ ಆಶ್ರಯ ಪಡೆದಿದ್ದಾರೆ. ಅವರೆಲ್ಲ ಸುರಕ್ಷಿತವಾಗಿ ಮತ್ತೆ ತಾಯ್ನಾಡಉ ತಲುಪುವುದನ್ನು ಎದುರು ನೋಡುತ್ತಿದ್ದಾರೆ.

2ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಮನು ಡಿ.ಎಸ್. ಅವರು ಚೆನ್‌ವಿಸಿ ಎಂಬಲ್ಲಿನ ಬುಕೊವಿನಾ ಸ್ಟೇಟ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯಾಗಿದ್ದರು. ಜತೆಗೆ ಸುದೀಪ್ ಪಾಟೀಲ್ ಕೂಡಾ ದಾವಣಗೆರೆ ಜಿಲ್ಲೆಯವರಾಗಿದ್ದು, ಇಬ್ಬರೂ ಮನೆ ತಲುಪಿದ್ದಾರೆ. ಚೆರ್ನ್‌ವಿಸಿಯಿಂದ ಕೀವ್ ವರೆಗೆ ರೈಲಿನಲ್ಲಿ ಬಂದು ಬಳಿಕ ಭಾರತಕ್ಕೆ ವಾಪಸ್ಸಾಗಿದ್ದಾಗಿ ಅವರು ಹೇಳಿದ್ದಾರೆ.

ಉಕ್ರೇನ್ ರಾಜಧಾನಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿದ್ದಾಗಿ ಅವರು ವಿವರಿಸಿದ್ದಾರೆ. “ನಮ್ಮ ವಿವಿ ಪೂರ್ವ ಉಕ್ರೇನ್‌ನಲ್ಲಿ ಇದ್ದ ಕಾರಣದಿಂದ ಯುದ್ಧ ಪ್ರದೇಶದಿಂದ ದೂರದ ಸ್ಥಳ. ಆದ್ದರಿಂದ ಸುರಕ್ಷಿತವಾಗಿ ಕೀವ್‌ಗೆ ತಲುಪಲು ಸಾಧ್ಯವಾಯಿತು” ಎಂದು ಮನು ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಇತರ ಮೂವರು ವಿದ್ಯಾರ್ಥಿಗಳಾದ ಸಯೀದಾ ಹಬೀಬಾ, ಹಬೀದ್ ಅಲಿ ಮತ್ತು ಪ್ರಿಯಾ ಭಾರತಕ್ಕೆ ಆಗಮಿಸುವ ಮಾರ್ಗಮಧ್ಯದಲ್ಲಿದ್ದಾರೆ ಎನ್ನಲಾಗಿದೆ. “ಕೀವ್ ವಿಮಾನ ನಿಲ್ದಾಣ ಮುಚ್ಚಿರುವುದರಿಂದ ಅವರು ಬಸ್ಸಿನಲ್ಲಿ ನೆರೆಯ ರೊಮಾನಿಯಾಗೆ ಆಗಮಿಸಿದ್ದಾರೆ. ರೊಮಾನಿಯಾದಿಂದ ಮುಂಬೈಗೆ ಬರುವ ವಿಮಾನದಲ್ಲಿ ಆಗಮಿಸುತ್ತಿರುವುದಾಗಿ ಮನು ಹೇಳಿದ್ದಾರೆ.

ವಿಜಾಪುರ ಜಿಲ್ಲೆಯ 13 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಇರುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದ್ದಾರೆ. ಈ ಪೈಕಿ ಸ್ನೇಹಾ ಪಾಟೀಲ್ ಎಂಬ ವಿದ್ಯಾರ್ಥಿನಿ ದೆಹಲಿಗೆ ಬಂದಿರುವುದಾಗಿ ವರದಿಯಾಗಿದೆ. ಉಕ್ರೇನ್‌ನಿಂದ ವಿಮಾನ ದರವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ ಎಂದು ವಿದ್ಯಾರ್ಥಿಯೊಬ್ಬರ ಪೋಷಕರು ದೂರಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಉಕ್ರೇನ್‌ನಲ್ಲೇ ಉಳಿಯುವಂತಾಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು