3:33 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಯುದ್ಧಪೀಡಿತ ಉಕ್ರೇನ್‌ನಿಂದ ಇಬ್ಬರು ದಾವಣಗೆರೆ ವಿದ್ಯಾರ್ಥಿಗಳು ಮನೆಗೆ ವಾಪಸ್:  ಇನ್ನು 3 ಮಂದಿ ತಾಯಿನಾಡಿನತ್ತ

27/02/2022, 14:12

ಸತ್ಯಪ್ರಕಾಶ್ ಜಾಧವ್ ದಾವಣಗೆರೆ

info.reporterkarnataka@gmail.com

ಉಕ್ರೇನ್- ರಷ್ಯಾ ಯುದ್ಧದ  ಹಿನ್ನೆಲೆಯಲ್ಲಿ ಅನಿಶ್ಚಿತತೆಯಲ್ಲಿ ಸಿಲುಕಿದ್ದ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆ ತಲುಪಿದ್ದು, ಮನೆ ಮಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ನಡುವೆ ವಿಜಯಪುರ ಜಿಲ್ಲೆಯ 13 ವಿದ್ಯಾರ್ಥಿಗಳು ಇನ್ನೂ ಪೂರ್ವ ಯೂರೋಪಿಯನ್ ದೇಶದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರು ಮೆಟ್ರೋದ ನೆಲ ಮಾಳಿಗೆಯಲ್ಲಿ ಸದ್ಯ ಆಶ್ರಯ ಪಡೆದಿದ್ದಾರೆ. ಅವರೆಲ್ಲ ಸುರಕ್ಷಿತವಾಗಿ ಮತ್ತೆ ತಾಯ್ನಾಡಉ ತಲುಪುವುದನ್ನು ಎದುರು ನೋಡುತ್ತಿದ್ದಾರೆ.

2ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಮನು ಡಿ.ಎಸ್. ಅವರು ಚೆನ್‌ವಿಸಿ ಎಂಬಲ್ಲಿನ ಬುಕೊವಿನಾ ಸ್ಟೇಟ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯಾಗಿದ್ದರು. ಜತೆಗೆ ಸುದೀಪ್ ಪಾಟೀಲ್ ಕೂಡಾ ದಾವಣಗೆರೆ ಜಿಲ್ಲೆಯವರಾಗಿದ್ದು, ಇಬ್ಬರೂ ಮನೆ ತಲುಪಿದ್ದಾರೆ. ಚೆರ್ನ್‌ವಿಸಿಯಿಂದ ಕೀವ್ ವರೆಗೆ ರೈಲಿನಲ್ಲಿ ಬಂದು ಬಳಿಕ ಭಾರತಕ್ಕೆ ವಾಪಸ್ಸಾಗಿದ್ದಾಗಿ ಅವರು ಹೇಳಿದ್ದಾರೆ.

ಉಕ್ರೇನ್ ರಾಜಧಾನಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿದ್ದಾಗಿ ಅವರು ವಿವರಿಸಿದ್ದಾರೆ. “ನಮ್ಮ ವಿವಿ ಪೂರ್ವ ಉಕ್ರೇನ್‌ನಲ್ಲಿ ಇದ್ದ ಕಾರಣದಿಂದ ಯುದ್ಧ ಪ್ರದೇಶದಿಂದ ದೂರದ ಸ್ಥಳ. ಆದ್ದರಿಂದ ಸುರಕ್ಷಿತವಾಗಿ ಕೀವ್‌ಗೆ ತಲುಪಲು ಸಾಧ್ಯವಾಯಿತು” ಎಂದು ಮನು ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಇತರ ಮೂವರು ವಿದ್ಯಾರ್ಥಿಗಳಾದ ಸಯೀದಾ ಹಬೀಬಾ, ಹಬೀದ್ ಅಲಿ ಮತ್ತು ಪ್ರಿಯಾ ಭಾರತಕ್ಕೆ ಆಗಮಿಸುವ ಮಾರ್ಗಮಧ್ಯದಲ್ಲಿದ್ದಾರೆ ಎನ್ನಲಾಗಿದೆ. “ಕೀವ್ ವಿಮಾನ ನಿಲ್ದಾಣ ಮುಚ್ಚಿರುವುದರಿಂದ ಅವರು ಬಸ್ಸಿನಲ್ಲಿ ನೆರೆಯ ರೊಮಾನಿಯಾಗೆ ಆಗಮಿಸಿದ್ದಾರೆ. ರೊಮಾನಿಯಾದಿಂದ ಮುಂಬೈಗೆ ಬರುವ ವಿಮಾನದಲ್ಲಿ ಆಗಮಿಸುತ್ತಿರುವುದಾಗಿ ಮನು ಹೇಳಿದ್ದಾರೆ.

ವಿಜಾಪುರ ಜಿಲ್ಲೆಯ 13 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಇರುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದ್ದಾರೆ. ಈ ಪೈಕಿ ಸ್ನೇಹಾ ಪಾಟೀಲ್ ಎಂಬ ವಿದ್ಯಾರ್ಥಿನಿ ದೆಹಲಿಗೆ ಬಂದಿರುವುದಾಗಿ ವರದಿಯಾಗಿದೆ. ಉಕ್ರೇನ್‌ನಿಂದ ವಿಮಾನ ದರವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ ಎಂದು ವಿದ್ಯಾರ್ಥಿಯೊಬ್ಬರ ಪೋಷಕರು ದೂರಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಉಕ್ರೇನ್‌ನಲ್ಲೇ ಉಳಿಯುವಂತಾಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು