8:48 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು