8:36 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಪಲ್ಗುಣಿ ನಿಧನ

18/01/2025, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಪಲ್ಗುಣಿ (57) ಅವರು ಹೃದಯಾಘಾತದಿಂದ ನಿಧನರಾದರು.
ಮೂಡಿಗೆರೆ ತಾಲೂಕು ಪಲ್ಗುಣಿ ಗ್ರಾಮದ ಮಹೇಂದ್ರ ಅವರಿಗೆ ಇಂದು ಬೆಳಿಗ್ಗೆ ಮೂಡಿಗೆರೆ ಕೃಷ್ಣ ಪುರದ ಅವರ ಅಕ್ಕನ ಮನೆಯಲ್ಲಿ ಬೆಳಿಗ್ಗೆ 8.45.ಕ್ಕೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ.
ಅವರು ಒಬ್ಬ ಸಹೊದರ ಹಾಗೂ ಇಬ್ಬರು  ಸಹೊದರಿಯರನ್ನು ಅಗಲಿದ್ದಾರೆ.
ಅವಿವಾಹಿತರಾಗಿದ್ದ ಮೃತರು ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು ಮತ್ತು ತಾವೇ ಯುವ ಜಾಗೃತ ಮತದಾರರ ವೇದಿಕೆಯನ್ನು ಹುಟ್ಟು ಹಾಕಿ ಅದರ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಮಾಜ ಸೇವೆಯಲ್ಲಿಯೂ ತಮ್ಮನ್ನು ಗುರುತಿಸಿಕೊಂಡಿದ್ದರು. ಮಲೆನಾಡು ಭಾಗದ ಅನೇಕ ಯುವಕ ಯುವತಿಯರಿಗೆ ಬೆಂಗಳೂರಿನಲ್ಲಿ ವಿವಿಧ ಕಂಪನಿಗಳಲ್ಲಿ ಕೆಲಸ ಕೊಡಿಸಿದ್ದರು. ಯುವಕರಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಇವರನ್ನು ಇವರ ಸ್ನೇಹಿತರ ಬಳಗ ಪ್ರೀತಿಯಿಂದ ಗುರೂಜಿ ಎಂದೆ ಕರೆಯುತ್ತಿದ್ದರು.
ಮಹೇಂದ್ರ ಕುಮಾರ್ ಅವರ ಅಕಾಲಿಕ ನಿಧನದಿಂದ ಅವರ ಕುಟುಂಬದವರು ಮತ್ತು ಸ್ನೇಹಿತರ ಬಳಗ ತೀವ್ರ ಅಘಾತಕ್ಕೆ ಒಳಗಾಗಿದ್ದಾರೆ
ಇಂದು ಶನಿವಾರ ಸಂಜೆ ಅವರ ಹುಟ್ಟೂರು ಮೂಡಿಗೆರೆ ಸಮೀಪದ ಪಲ್ಗುಣಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು