9:26 AM Sunday9 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಪಲ್ಗುಣಿ ನಿಧನ

18/01/2025, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಪಲ್ಗುಣಿ (57) ಅವರು ಹೃದಯಾಘಾತದಿಂದ ನಿಧನರಾದರು.
ಮೂಡಿಗೆರೆ ತಾಲೂಕು ಪಲ್ಗುಣಿ ಗ್ರಾಮದ ಮಹೇಂದ್ರ ಅವರಿಗೆ ಇಂದು ಬೆಳಿಗ್ಗೆ ಮೂಡಿಗೆರೆ ಕೃಷ್ಣ ಪುರದ ಅವರ ಅಕ್ಕನ ಮನೆಯಲ್ಲಿ ಬೆಳಿಗ್ಗೆ 8.45.ಕ್ಕೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ.
ಅವರು ಒಬ್ಬ ಸಹೊದರ ಹಾಗೂ ಇಬ್ಬರು  ಸಹೊದರಿಯರನ್ನು ಅಗಲಿದ್ದಾರೆ.
ಅವಿವಾಹಿತರಾಗಿದ್ದ ಮೃತರು ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು ಮತ್ತು ತಾವೇ ಯುವ ಜಾಗೃತ ಮತದಾರರ ವೇದಿಕೆಯನ್ನು ಹುಟ್ಟು ಹಾಕಿ ಅದರ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಮಾಜ ಸೇವೆಯಲ್ಲಿಯೂ ತಮ್ಮನ್ನು ಗುರುತಿಸಿಕೊಂಡಿದ್ದರು. ಮಲೆನಾಡು ಭಾಗದ ಅನೇಕ ಯುವಕ ಯುವತಿಯರಿಗೆ ಬೆಂಗಳೂರಿನಲ್ಲಿ ವಿವಿಧ ಕಂಪನಿಗಳಲ್ಲಿ ಕೆಲಸ ಕೊಡಿಸಿದ್ದರು. ಯುವಕರಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಇವರನ್ನು ಇವರ ಸ್ನೇಹಿತರ ಬಳಗ ಪ್ರೀತಿಯಿಂದ ಗುರೂಜಿ ಎಂದೆ ಕರೆಯುತ್ತಿದ್ದರು.
ಮಹೇಂದ್ರ ಕುಮಾರ್ ಅವರ ಅಕಾಲಿಕ ನಿಧನದಿಂದ ಅವರ ಕುಟುಂಬದವರು ಮತ್ತು ಸ್ನೇಹಿತರ ಬಳಗ ತೀವ್ರ ಅಘಾತಕ್ಕೆ ಒಳಗಾಗಿದ್ದಾರೆ
ಇಂದು ಶನಿವಾರ ಸಂಜೆ ಅವರ ಹುಟ್ಟೂರು ಮೂಡಿಗೆರೆ ಸಮೀಪದ ಪಲ್ಗುಣಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು