9:46 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಪಲ್ಗುಣಿ ನಿಧನ

18/01/2025, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಪಲ್ಗುಣಿ (57) ಅವರು ಹೃದಯಾಘಾತದಿಂದ ನಿಧನರಾದರು.
ಮೂಡಿಗೆರೆ ತಾಲೂಕು ಪಲ್ಗುಣಿ ಗ್ರಾಮದ ಮಹೇಂದ್ರ ಅವರಿಗೆ ಇಂದು ಬೆಳಿಗ್ಗೆ ಮೂಡಿಗೆರೆ ಕೃಷ್ಣ ಪುರದ ಅವರ ಅಕ್ಕನ ಮನೆಯಲ್ಲಿ ಬೆಳಿಗ್ಗೆ 8.45.ಕ್ಕೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ.
ಅವರು ಒಬ್ಬ ಸಹೊದರ ಹಾಗೂ ಇಬ್ಬರು  ಸಹೊದರಿಯರನ್ನು ಅಗಲಿದ್ದಾರೆ.
ಅವಿವಾಹಿತರಾಗಿದ್ದ ಮೃತರು ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು ಮತ್ತು ತಾವೇ ಯುವ ಜಾಗೃತ ಮತದಾರರ ವೇದಿಕೆಯನ್ನು ಹುಟ್ಟು ಹಾಕಿ ಅದರ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಮಾಜ ಸೇವೆಯಲ್ಲಿಯೂ ತಮ್ಮನ್ನು ಗುರುತಿಸಿಕೊಂಡಿದ್ದರು. ಮಲೆನಾಡು ಭಾಗದ ಅನೇಕ ಯುವಕ ಯುವತಿಯರಿಗೆ ಬೆಂಗಳೂರಿನಲ್ಲಿ ವಿವಿಧ ಕಂಪನಿಗಳಲ್ಲಿ ಕೆಲಸ ಕೊಡಿಸಿದ್ದರು. ಯುವಕರಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಇವರನ್ನು ಇವರ ಸ್ನೇಹಿತರ ಬಳಗ ಪ್ರೀತಿಯಿಂದ ಗುರೂಜಿ ಎಂದೆ ಕರೆಯುತ್ತಿದ್ದರು.
ಮಹೇಂದ್ರ ಕುಮಾರ್ ಅವರ ಅಕಾಲಿಕ ನಿಧನದಿಂದ ಅವರ ಕುಟುಂಬದವರು ಮತ್ತು ಸ್ನೇಹಿತರ ಬಳಗ ತೀವ್ರ ಅಘಾತಕ್ಕೆ ಒಳಗಾಗಿದ್ದಾರೆ
ಇಂದು ಶನಿವಾರ ಸಂಜೆ ಅವರ ಹುಟ್ಟೂರು ಮೂಡಿಗೆರೆ ಸಮೀಪದ ಪಲ್ಗುಣಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು