11:52 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಪಲ್ಗುಣಿ ನಿಧನ

18/01/2025, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಪಲ್ಗುಣಿ (57) ಅವರು ಹೃದಯಾಘಾತದಿಂದ ನಿಧನರಾದರು.
ಮೂಡಿಗೆರೆ ತಾಲೂಕು ಪಲ್ಗುಣಿ ಗ್ರಾಮದ ಮಹೇಂದ್ರ ಅವರಿಗೆ ಇಂದು ಬೆಳಿಗ್ಗೆ ಮೂಡಿಗೆರೆ ಕೃಷ್ಣ ಪುರದ ಅವರ ಅಕ್ಕನ ಮನೆಯಲ್ಲಿ ಬೆಳಿಗ್ಗೆ 8.45.ಕ್ಕೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತ ಪಟ್ಟಿದ್ದಾರೆ.
ಅವರು ಒಬ್ಬ ಸಹೊದರ ಹಾಗೂ ಇಬ್ಬರು  ಸಹೊದರಿಯರನ್ನು ಅಗಲಿದ್ದಾರೆ.
ಅವಿವಾಹಿತರಾಗಿದ್ದ ಮೃತರು ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು ಮತ್ತು ತಾವೇ ಯುವ ಜಾಗೃತ ಮತದಾರರ ವೇದಿಕೆಯನ್ನು ಹುಟ್ಟು ಹಾಕಿ ಅದರ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಮಾಜ ಸೇವೆಯಲ್ಲಿಯೂ ತಮ್ಮನ್ನು ಗುರುತಿಸಿಕೊಂಡಿದ್ದರು. ಮಲೆನಾಡು ಭಾಗದ ಅನೇಕ ಯುವಕ ಯುವತಿಯರಿಗೆ ಬೆಂಗಳೂರಿನಲ್ಲಿ ವಿವಿಧ ಕಂಪನಿಗಳಲ್ಲಿ ಕೆಲಸ ಕೊಡಿಸಿದ್ದರು. ಯುವಕರಿಗೆ ಉತ್ತಮ ಮಾರ್ಗದರ್ಶಕರಾಗಿದ್ದರು. ಇವರನ್ನು ಇವರ ಸ್ನೇಹಿತರ ಬಳಗ ಪ್ರೀತಿಯಿಂದ ಗುರೂಜಿ ಎಂದೆ ಕರೆಯುತ್ತಿದ್ದರು.
ಮಹೇಂದ್ರ ಕುಮಾರ್ ಅವರ ಅಕಾಲಿಕ ನಿಧನದಿಂದ ಅವರ ಕುಟುಂಬದವರು ಮತ್ತು ಸ್ನೇಹಿತರ ಬಳಗ ತೀವ್ರ ಅಘಾತಕ್ಕೆ ಒಳಗಾಗಿದ್ದಾರೆ
ಇಂದು ಶನಿವಾರ ಸಂಜೆ ಅವರ ಹುಟ್ಟೂರು ಮೂಡಿಗೆರೆ ಸಮೀಪದ ಪಲ್ಗುಣಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು