3:44 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು