2:47 AM Wednesday16 - April 2025
ಬ್ರೇಕಿಂಗ್ ನ್ಯೂಸ್
ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ…

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು