10:00 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು