9:45 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು